ಹಿರಿಯ ಕಾರು ಚಾಲಕ ಕಲ್ಲಡ್ಕ ನಿವಾಸಿ ಸುಲೈಮಾನ್ (93) ಅವರು ವಯೋಸಹಜ ಅನಾರೋಗ್ಯದಿಂದ ಮಂಗಳವಾರ ಸ್ಥಳೀಯ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಕಳೆದ 70 ವರ್ಷಗಳಿಂದ ಕಾರು ಚಾಲಕರಾಗಿ ದುಡಿದ ಶ್ರಮಜೀವಿಯಾಗಿದ್ದು, ಸ್ವಾತಂತ್ರ್ಯಾನ0ತರ ಪ್ರಥಮವಾಗಿ ವಾಹನ ಚಾಲನ ಪರವಾನಿಗೆ ಆರಂಭವಾದ 1955 ನೇ ಇಸವಿಯಲ್ಲಿ ಚಾಲನಾ ಪರವಾನಿಗೆ ಪಡೆದಿದ್ದರು. ಅಂದಿನ ಆ ದಿನಗಳಲ್ಲಿ ಕಲ್ಲಡ್ಕದಿಂದ ಮುಂಬಯಿಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದ ಹೆಗ್ಗಳಿಕೆ ಇವರದ್ದು. ಕುರಾನ್ ಬಗ್ಗೆ ಅಪಾರ ತಿಳುವಳಿಕೆ ಹೊಂದಿದ ಇವರು ಅರೆಬಿಕ್ ಮತ್ತು ಮಲಯಾಳಂ ಬಾಷಾ ಜ್ಞಾನವನ್ನು ಹೊಂದಿದ್ದರು. 70 ವರ್ಷಗಳ ತಮ್ಮ ಚಾಲಕ ಸೇವಾವಧಿಯಲ್ಲಿ ಕಲ್ಲಡ್ಕ ಮ್ಯೂಸಿಯಂ ನ ಕೆ.ಎಸ್.ಯಾಸಿರ್ ಸಹಿತ ನೂರಾರು ಮಂದಿಗೆ ವಾಹನ ಚಲಾಯಿಸಲು ಕಲಿಸಿಕೊಟ್ಟವರು. ಕಲ್ಲಡ್ಕದ ಹೆಸರಾಂತ ಕಾಂಗ್ರೆಸ್ ಮುಖಂಡ ದಿ. ಇಸ್ಮಾಯಿಲ್ ಕಲ್ಲಡ್ಕ, ಹೆಸರಾಂತ ಉದ್ಯಮಿ ದಿ.ಸೇಸಾರಿ ಶಾಫಿ ಹಾಜಿ (ಸೇಸರಾಜ್) ಅವರ ಸಹೋದರರಾಗಿರುವ ಸುಲೈಮಾನ್ ಅವರು ಪತ್ನಿ, ಓರ್ವ ಪುತ್ರ, ನಾಲ್ವರು ಪುತ್ರಿಯರ ಸಹಿತ ಅಪಾರ ಸಂಖ್ಯೆಯ ಬಂಧು ಬಳಗವನ್ನು ಅಗಲಿದ್ದಾರೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್…
ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…
ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…
ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವತಿಯೊಬ್ಬಳು ಮರುದಿನ ಲಾಡ್ಜ್ ವೊಂದರಲ್ಲಿ ಶ*ವವಾಗಿ ಪತ್ತೆಯಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ…
ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ…
ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆಯ ಮುಂಭಾಗದಲ್ಲಿ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದನ್ನು ಶಕ್ತಿ ವಿದ್ಯಾಸಂಸ್ಥೆಯ ಸಿಬ್ಬಂದಿಗಳು…