ಕರ್ನಾಟಕ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀಮತಿ ತುಳಸಿ ಮದ್ದಿನೇನಿ ಜೂನ್ 3ರಂದು ಸುಬ್ರಮಣ್ಯದ ಬಿ ಸಿ ಎಂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವರು.
ಮಂಗಳವಾರ ಬೆಳಿಗ್ಗೆ ಬೆಂಗಳೂರಿ0ದ ಸುಬ್ರಹ್ಮಣ್ಯ ರೋಡ್ ನೆಟ್ಟಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ತುಳಸಿ ಮದ್ದಿನೇನಿ ಅವರು ನೇರವಾಗಿ ಕುಕ್ಕೆ ಸುಬ್ರಹ್ಮಣ್ಯ ಕಾಶಿ ಕಟ್ಟೆ ಬಳಿ ಇರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆಗಳನ್ನು ಪರಿಶೀಲಿಸಿ ಬೆಳಗ್ಗೆ ಉಪಹಾರ ಸೇವಿಸಿದರು ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರೊಂದಿಗೆ ಮಾತನಾಡಿದ ಅವರು ಗುಣಮಟ್ಟದ ಆಹಾರ ಬಗ್ಗೆ ನೀರಿನ ವ್ಯವಸ್ಥೆ ವಿಶ್ರಾಂತಿ ಕೊಠಡಿ ಕಂಪ್ಯೂಟರ್ ಕೊಠಡಿ ಅಡುಗೆ ಕೋಣೆ ಓದುವ ಕೋಣೆ ಶೌಚಾಲಯ ಇತ್ಯಾದಿಗಳನ್ನ ವೀಕ್ಷಿಸಿ, ಮಾಹಿತಿ ಪಡೆದುಕೊಂಡರು. ವಿದ್ಯಾರ್ಥಿನಿ ವಸತಿ ನಿಲಯದ ಸುಶ್ಮಿತಾ, ಮೌನ, ಸಾಕ್ಷಿ, ಮೌಲ್ಯ ,ಹಾಗೂ ಜೀವಿತ ವಿವರಗಳನ್ನು ನೀಡಿದರು. ಹೊಸ ಕಟ್ಟಡ ನಿರ್ಮಾಣದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದವರು ಕೇವಲ 100 ವಿದ್ಯಾರ್ಥಿಗಳಿಗೆ ಇರುವ ವಸತಿ ನಿಲಯವನ್ನು 250 ವಿದ್ಯಾರ್ಥಿಯರ ವಾಸ್ತವ್ಯಕ್ಕೆ ಅನುಕೂಲ ಆಗುವಂತೆ ಪ್ಲಾನ್ ಅಂಡ್ ಎಸ್ಟಿಮೇಶನ್ ಮಾಡಿ ಕಳುಹಿಸುವಂತೆ ತಾಲೂಕು ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ತದನಂತರ ಅಲ್ಲಿಂದ ವಾಲ್ಮೀಕಿ ಆಶ್ರಮ ಶಾಲೆಗೆ ತೆರಳಿ ಅಲ್ಲಿಯ ಹೊಸ ಕಟ್ಟಡ ವೀಕ್ಷಿಸಿ, ಜುಲೈ ತಿಂಗಳೊಳಗೆ ಶೀಘ್ರ ತೆರೆಯುವಂತೆ ಅಧಿಕಾರಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತ ಷ್ಟೆಲ್ಲ ವರ್ಗೀಸ್, ತಹಶೀಲ್ದಾರ್ ಪ್ರಭಾಕರ ಕಜೋರೆ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಲೋಕೋಪಯೋಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗೋಪಾಲ್, ಹಾಗೂ ಶ್ರೀಕಾಂತ್, ಸಹಾಯಕ ಇಂಜಿನಿಯರ್ ಪ್ರಮೋದ್, ಹಿಂದುಳಿದ ಬಿಸಿಎಂ ಪುತ್ತೂರು ಅಧಿಕಾರಿ ಗಂಗಯ ನಾಯಕ್, ಬಿ ಸಿ ಎಂ ಸುಳ್ಯ ಅಧಿಕಾರಿ ಗೀತಾ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಬಂಡಾರಿ, ವಲಯ ಅರಣ್ಯಾಧಿಕಾರಿ ವಿಮಲ್ ಬಾಬು, ಕಡಬ ಕಂದಾಯ ಅಧಿಕಾರಿ ಪೃಥ್ವಿರಾಜ್, ಸುಬ್ರಮಣ್ಯ ಗ್ರಾಮಾಧಿಕಾರಿ ರವಿಚಂದ್ರ, ಸುಬ್ರಹ್ಮಣ್ಯ ಪಿಡಿಒ ಮಹೇಶ್, ಕಾರ್ಯದರ್ಶಿ ಮೋನಪ್ಪ ಡಿ, ವೈದ್ಯಾಧಿಕಾರಿ ಡಾಕ್ಟರ್ ತ್ರಿಮೂರ್ತಿ, ಬಿಸಿಎಂ ಜಿಲ್ಲಾ ಹಾಗೂ ತಾಲೂಕ ಅಧಿಕಾರಿಗಳು ,ಸುಬ್ರಹ್ಮಣ್ಯ ಬಿ ಸಿ ಎಂ ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿ ವರ್ಗದವರು ವಾಲ್ಮೀಕಿ ಆಶ್ರಮ ಶಾಲೆಯ ವಾರ್ಡನ್ ಮುಂತಾದವರು ಈ ಸಂದರ್ಭದಲ್ಲಿ ಉಪಸಿತರಿದ್ದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…