ಸಮುದಾಯಕ್ಕಾದ ಅನ್ಯಾಯವನ್ನು ಪ್ರಶ್ನಿಸಿ ಪಕ್ಷದ ಹುದ್ದೆಗೆ ನೀಡಿದ ರಾಜೀನಾಮೆಗೆ ಪಕ್ಷದಿಂದ ನೀಡಲಾದ ಶೋಕಾಸ್ ನೋಟಿಸು ಹಿಂಪಡೆಯಬೇಕೆAದು ಕಡಬ ಅಲ್ಪ ಸಂಖ್ಯಾತ ಮುಖಂಡ ಅಶ್ರಫ್ ಶೇಡಿಗುಂಡಿ ಆಗ್ರಹಿಸಿದ್ದಾರೆ. ಅವರು ಕಡಬದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ತಾವು ಪ್ರತಿನಿಧಿಸುವ ಸಮುದಾಯಕ್ಕೆ ನೋವಾದಾಗ ಸಮುದಾಯ ನಿರಂತರ ಅನ್ಯಾಯಕ್ಕೊಳಗಾದ ಆ ಸಮುದಾಯದ ನಾಯಕರಾಗಿ ನೋವನ್ನು ವ್ಯಕ್ತಪಡಿಸುವುದು, ಆಗಿರುವ ಅನ್ಯಾಯಕ್ಕೆ ನ್ಯಾಯವನ್ನು ಕೇಳುವುದು, ನಾಯಕನಾದವನ ಸಹಜ ನಡೆಯಾಗಿದೆ.
ಈ ನಿಟ್ಟಿನಲ್ಲಿ ಅಮಾಯಕ ಊರಿನಲ್ಲಿ ಎಲ್ಲಾ ಧರ್ಮದವರೊಂದಿಗೆ ಅನ್ಯೋನ್ಯತೆಯಿಂದಿದ್ದ ಒಂದೇ ಒಂದು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗದ ನಿಷ್ಕಳಂಕ ವ್ಯಕ್ತಿತ್ವದ ಒಬ್ಬ ಯುವಕನ್ನು ಕಗ್ಗೊಲೆ ನಡೆಸಿದ ಬಗ್ಗೆ ನ್ಯಾಯ ಕೇಳಲು ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಮತ್ತು ಉಪಾಧ್ಯಕ್ಷ ಕೆ. ಅಶ್ರಫ್ ನೇತೃತ್ವದಲ್ಲಿ ಪಕ್ಷದ ಅಲ್ಪಸಂಖ್ಯಾತ ಮುಖಂಡರು ಸಭೆ ಕರೆದಿದ್ರು. ಇದು ಸಹಜ ಪ್ರಕ್ರಿಯೆ ಇದ್ಯಾವುದೂ ಪಕ್ಷದ ಮೇಲಿನ ದ್ವೇಷದಿಂದಲ್ಲ, ಬದಲಾಗಿ ಪಕ್ಷದ ಅಸ್ತಿತ್ವ ಉಳಿಸಲು ಸರಕಾರವನ್ನು ಎಚ್ಚರಿಸಲು ಹಾಗೂ ತಮ್ಮ ನೋವನ್ನು ತೋರಿಸಲು ಸಾಮೂಹಿಕ ರಾಜೀನಾಮೆ ಅನಿವಾರ್ಯವಾಗಿತ್ತು. ಆದರೆ ಅಂತಹ ನಾಯಕರಿಗೆ ಪಕ್ಷದ ವತಿಯಿಂದ ಶೋಕಾಸ್ ನೋಟೀಸು ಜಾರಿ ಮಾಡಿ, ಶಿಸ್ತು ಕ್ರಮದ ಎಚ್ಚರಿಕೆ ಸರಿಯಲ್ಲ, ತಕ್ಷಣ ಶೋಕಾಸ್ ನೋಟೀಸು ಹಿಂಪಡೆದು ನ್ಯಾಯ ಒದಗಿಸಬೇಕಾಗಿ ಕಡಬ ಬ್ಲಾಕ್ ಅಲ್ಪಸಂಖ್ಯಾತ ಮುಖಂಡರು ಆಗ್ರಹಿಸಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…