ಸಮುದಾಯಕ್ಕಾದ ಅನ್ಯಾಯವನ್ನು ಪ್ರಶ್ನಿಸಿ ಪಕ್ಷದ ಹುದ್ದೆಗೆ ನೀಡಿದ ರಾಜೀನಾಮೆಗೆ ಪಕ್ಷದಿಂದ ನೀಡಲಾದ ಶೋಕಾಸ್ ನೋಟಿಸು ಹಿಂಪಡೆಯಬೇಕೆAದು ಕಡಬ ಅಲ್ಪ ಸಂಖ್ಯಾತ ಮುಖಂಡ ಅಶ್ರಫ್ ಶೇಡಿಗುಂಡಿ ಆಗ್ರಹಿಸಿದ್ದಾರೆ. ಅವರು ಕಡಬದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ತಾವು ಪ್ರತಿನಿಧಿಸುವ ಸಮುದಾಯಕ್ಕೆ ನೋವಾದಾಗ ಸಮುದಾಯ ನಿರಂತರ ಅನ್ಯಾಯಕ್ಕೊಳಗಾದ ಆ ಸಮುದಾಯದ ನಾಯಕರಾಗಿ ನೋವನ್ನು ವ್ಯಕ್ತಪಡಿಸುವುದು, ಆಗಿರುವ ಅನ್ಯಾಯಕ್ಕೆ ನ್ಯಾಯವನ್ನು ಕೇಳುವುದು, ನಾಯಕನಾದವನ ಸಹಜ ನಡೆಯಾಗಿದೆ.
ಈ ನಿಟ್ಟಿನಲ್ಲಿ ಅಮಾಯಕ ಊರಿನಲ್ಲಿ ಎಲ್ಲಾ ಧರ್ಮದವರೊಂದಿಗೆ ಅನ್ಯೋನ್ಯತೆಯಿಂದಿದ್ದ ಒಂದೇ ಒಂದು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗದ ನಿಷ್ಕಳಂಕ ವ್ಯಕ್ತಿತ್ವದ ಒಬ್ಬ ಯುವಕನ್ನು ಕಗ್ಗೊಲೆ ನಡೆಸಿದ ಬಗ್ಗೆ ನ್ಯಾಯ ಕೇಳಲು ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಮತ್ತು ಉಪಾಧ್ಯಕ್ಷ ಕೆ. ಅಶ್ರಫ್ ನೇತೃತ್ವದಲ್ಲಿ ಪಕ್ಷದ ಅಲ್ಪಸಂಖ್ಯಾತ ಮುಖಂಡರು ಸಭೆ ಕರೆದಿದ್ರು. ಇದು ಸಹಜ ಪ್ರಕ್ರಿಯೆ ಇದ್ಯಾವುದೂ ಪಕ್ಷದ ಮೇಲಿನ ದ್ವೇಷದಿಂದಲ್ಲ, ಬದಲಾಗಿ ಪಕ್ಷದ ಅಸ್ತಿತ್ವ ಉಳಿಸಲು ಸರಕಾರವನ್ನು ಎಚ್ಚರಿಸಲು ಹಾಗೂ ತಮ್ಮ ನೋವನ್ನು ತೋರಿಸಲು ಸಾಮೂಹಿಕ ರಾಜೀನಾಮೆ ಅನಿವಾರ್ಯವಾಗಿತ್ತು. ಆದರೆ ಅಂತಹ ನಾಯಕರಿಗೆ ಪಕ್ಷದ ವತಿಯಿಂದ ಶೋಕಾಸ್ ನೋಟೀಸು ಜಾರಿ ಮಾಡಿ, ಶಿಸ್ತು ಕ್ರಮದ ಎಚ್ಚರಿಕೆ ಸರಿಯಲ್ಲ, ತಕ್ಷಣ ಶೋಕಾಸ್ ನೋಟೀಸು ಹಿಂಪಡೆದು ನ್ಯಾಯ ಒದಗಿಸಬೇಕಾಗಿ ಕಡಬ ಬ್ಲಾಕ್ ಅಲ್ಪಸಂಖ್ಯಾತ ಮುಖಂಡರು ಆಗ್ರಹಿಸಿದ್ದಾರೆ.
ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ…
ಎರಡು ದಿನಗಳ ಹಿಂದೆ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ…
ಹೋಟೆಲ್ನಲ್ಲಿದ್ದ ಎರಡು ಸಿಲಿಂಡರ್ ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ ಹೋಟೆಲ್ ಹೊತ್ತಿ ಉರಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ…
ಆದಿ ಉಡುಪಿ ಎಪಿಎಂಸಿ ಮಾರುಕಟ್ಟೆಯ ಹಿಂಭಾಗದ ಖಾಸಗಿ ಸ್ಥಳದಲ್ಲಿದ್ದರುವ ಪಾಳುಬಾವಿಯಲ್ಲಿ ಕೊಳೆತಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮೃತದೇಹ…
ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ…
ಮುಂಡತಿಕ್ಕೋಡುವಿನ ಪಟಾಕಿ ಸಂಗ್ರಹಣಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 14 ಜನರು ಸಾವನ್ನಪ್ಪಿದ ನಂತರ, ತ್ರಿಶೂರ್ ಪೂರಂ ಉತ್ಸವದ ಪಟಾಕಿ…