ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ಮಂಗಳೂರಲ್ಲಿ ಶಾಂತಿ ನಿರ್ಮಾಣ ನಮ್ಮ ಗುರಿ”; ಮಾಜಿ ಸಚಿವ ರಮಾನಾಥ ರೈ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ಮತ್ತೆ ಮತ್ತೆ ಶಾಂತಿಯನ್ನು ಕದಡುತ್ತಿವೆ. ಕಳೆದ ಕೆಲವಾರು ವರುಷಗಳಲ್ಲಿ ಇಲ್ಲಿ 50 ಕ್ಕೂ ಅಧಿಕ ಕೊಲೆ ಪ್ರಕರಣಗಳು ನಡೆದಿವೆ. ಇಲ್ಲಿ ಶಾಂತಿ ಸ್ಥಾಪನೆ ಅಗತ್ಯವಿದೆ ಎಂದು ಮಾಜಿ ಸಚಿವ ರಮಾನಾಥ ರೈ ಪ್ರತಿಪಾದಿಸಿದ್ದಾರೆ.

ಇದೇ ಸಂದರ್ಭ ಅವರು ಮಂಗಳೂರು ಮಣಿಪುರ ಆಗುವುದು ಬೇಡ ಎಂದೂ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ.ಸಿ.ಸಿ. ಉಪಾಧ್ಯಕ್ಷರೂ ಆಗಿರುವ ರಮಾನಾಥ ರೈ ಅವರು, ಈ ಸರಣಿ ಹತ್ಯೆಗಳ ಷಡ್ಯಂತ್ರದ ಹಿಂದೆ ಅಡಗಿರುವ ಪಿತೂರಿದಾರರನ್ನು ಕಂಡು ಹಿಡಿಯಬೇಕು. ಇಲ್ಲಿ ಶಾಂತಿಯನ್ನು ಕಾಪಾಡುವ ಸಲುವಾಗಿ ರೂಪಿತವಾದ ಆ್ಯಂಟಿ ಕಮ್ಯುನಲ್ ಫೋರ್ಸ್ ಶೀಘ್ರವೇ ಕಾರ್ಯಾಚರಣೆ ನಡೆಸಲಿದೆ. ಹಿಂದೆ ಈ ಜಿಲ್ಲೆಯಲ್ಲಿ ಕೊಲೆ, ಶಾಂತಿ ಕದಡುವ ಪ್ರಯತ್ನಗಳು ನಡೆದಾಗ ಶಾಂತಿ ಸಭೆಗಳು ನಡೆಯುತ್ತಿದ್ದವು. ಆದರೆ ಈ ಶಾಂತಿ ಸಭೆಯಲ್ಲಿ ಕೆಲವು ಸಂಘಟನೆಗಳು ಭಾಗವಹಿಸುತ್ತಿರಲಿಲ್ಲ. ಆ ಸಂಘಟನೆಗಳಿಗೆ ಇಲ್ಲಿ ಶಾಂತಿ ಸ್ಥಾಪನೆಗೆ ಬದಲಾಗಿ ಸಂಘರ್ಷದ ವಾತಾವರಣ ಬೇಕಾಗಿರುತ್ತಿತ್ತು ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಶಶಿಧರ್ ಹೆಗ್ಡೆ, ಶುಭೋದಯ ಆಳ್ವ,ದಿನೇಶ್, ಪ್ರಕಾಶ್ ಸಾಲಿಯಾನ್ ಸೇರಿದಂತೆ ಹಲವರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!