ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ಮತ್ತೆ ಮತ್ತೆ ಶಾಂತಿಯನ್ನು ಕದಡುತ್ತಿವೆ. ಕಳೆದ ಕೆಲವಾರು ವರುಷಗಳಲ್ಲಿ ಇಲ್ಲಿ 50 ಕ್ಕೂ ಅಧಿಕ ಕೊಲೆ ಪ್ರಕರಣಗಳು ನಡೆದಿವೆ. ಇಲ್ಲಿ ಶಾಂತಿ ಸ್ಥಾಪನೆ ಅಗತ್ಯವಿದೆ ಎಂದು ಮಾಜಿ ಸಚಿವ ರಮಾನಾಥ ರೈ ಪ್ರತಿಪಾದಿಸಿದ್ದಾರೆ.
ಇದೇ ಸಂದರ್ಭ ಅವರು ಮಂಗಳೂರು ಮಣಿಪುರ ಆಗುವುದು ಬೇಡ ಎಂದೂ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ.ಸಿ.ಸಿ. ಉಪಾಧ್ಯಕ್ಷರೂ ಆಗಿರುವ ರಮಾನಾಥ ರೈ ಅವರು, ಈ ಸರಣಿ ಹತ್ಯೆಗಳ ಷಡ್ಯಂತ್ರದ ಹಿಂದೆ ಅಡಗಿರುವ ಪಿತೂರಿದಾರರನ್ನು ಕಂಡು ಹಿಡಿಯಬೇಕು. ಇಲ್ಲಿ ಶಾಂತಿಯನ್ನು ಕಾಪಾಡುವ ಸಲುವಾಗಿ ರೂಪಿತವಾದ ಆ್ಯಂಟಿ ಕಮ್ಯುನಲ್ ಫೋರ್ಸ್ ಶೀಘ್ರವೇ ಕಾರ್ಯಾಚರಣೆ ನಡೆಸಲಿದೆ. ಹಿಂದೆ ಈ ಜಿಲ್ಲೆಯಲ್ಲಿ ಕೊಲೆ, ಶಾಂತಿ ಕದಡುವ ಪ್ರಯತ್ನಗಳು ನಡೆದಾಗ ಶಾಂತಿ ಸಭೆಗಳು ನಡೆಯುತ್ತಿದ್ದವು. ಆದರೆ ಈ ಶಾಂತಿ ಸಭೆಯಲ್ಲಿ ಕೆಲವು ಸಂಘಟನೆಗಳು ಭಾಗವಹಿಸುತ್ತಿರಲಿಲ್ಲ. ಆ ಸಂಘಟನೆಗಳಿಗೆ ಇಲ್ಲಿ ಶಾಂತಿ ಸ್ಥಾಪನೆಗೆ ಬದಲಾಗಿ ಸಂಘರ್ಷದ ವಾತಾವರಣ ಬೇಕಾಗಿರುತ್ತಿತ್ತು ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಶಶಿಧರ್ ಹೆಗ್ಡೆ, ಶುಭೋದಯ ಆಳ್ವ,ದಿನೇಶ್, ಪ್ರಕಾಶ್ ಸಾಲಿಯಾನ್ ಸೇರಿದಂತೆ ಹಲವರು ಉಪಸ್ಥಿತರಿದ್ರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…