ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ಮತ್ತೆ ಮತ್ತೆ ಶಾಂತಿಯನ್ನು ಕದಡುತ್ತಿವೆ. ಕಳೆದ ಕೆಲವಾರು ವರುಷಗಳಲ್ಲಿ ಇಲ್ಲಿ 50 ಕ್ಕೂ ಅಧಿಕ ಕೊಲೆ ಪ್ರಕರಣಗಳು ನಡೆದಿವೆ. ಇಲ್ಲಿ ಶಾಂತಿ ಸ್ಥಾಪನೆ ಅಗತ್ಯವಿದೆ ಎಂದು ಮಾಜಿ ಸಚಿವ ರಮಾನಾಥ ರೈ ಪ್ರತಿಪಾದಿಸಿದ್ದಾರೆ.
ಇದೇ ಸಂದರ್ಭ ಅವರು ಮಂಗಳೂರು ಮಣಿಪುರ ಆಗುವುದು ಬೇಡ ಎಂದೂ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ.ಸಿ.ಸಿ. ಉಪಾಧ್ಯಕ್ಷರೂ ಆಗಿರುವ ರಮಾನಾಥ ರೈ ಅವರು, ಈ ಸರಣಿ ಹತ್ಯೆಗಳ ಷಡ್ಯಂತ್ರದ ಹಿಂದೆ ಅಡಗಿರುವ ಪಿತೂರಿದಾರರನ್ನು ಕಂಡು ಹಿಡಿಯಬೇಕು. ಇಲ್ಲಿ ಶಾಂತಿಯನ್ನು ಕಾಪಾಡುವ ಸಲುವಾಗಿ ರೂಪಿತವಾದ ಆ್ಯಂಟಿ ಕಮ್ಯುನಲ್ ಫೋರ್ಸ್ ಶೀಘ್ರವೇ ಕಾರ್ಯಾಚರಣೆ ನಡೆಸಲಿದೆ. ಹಿಂದೆ ಈ ಜಿಲ್ಲೆಯಲ್ಲಿ ಕೊಲೆ, ಶಾಂತಿ ಕದಡುವ ಪ್ರಯತ್ನಗಳು ನಡೆದಾಗ ಶಾಂತಿ ಸಭೆಗಳು ನಡೆಯುತ್ತಿದ್ದವು. ಆದರೆ ಈ ಶಾಂತಿ ಸಭೆಯಲ್ಲಿ ಕೆಲವು ಸಂಘಟನೆಗಳು ಭಾಗವಹಿಸುತ್ತಿರಲಿಲ್ಲ. ಆ ಸಂಘಟನೆಗಳಿಗೆ ಇಲ್ಲಿ ಶಾಂತಿ ಸ್ಥಾಪನೆಗೆ ಬದಲಾಗಿ ಸಂಘರ್ಷದ ವಾತಾವರಣ ಬೇಕಾಗಿರುತ್ತಿತ್ತು ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಶಶಿಧರ್ ಹೆಗ್ಡೆ, ಶುಭೋದಯ ಆಳ್ವ,ದಿನೇಶ್, ಪ್ರಕಾಶ್ ಸಾಲಿಯಾನ್ ಸೇರಿದಂತೆ ಹಲವರು ಉಪಸ್ಥಿತರಿದ್ರು.
ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ…
ಎರಡು ದಿನಗಳ ಹಿಂದೆ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ…
ಹೋಟೆಲ್ನಲ್ಲಿದ್ದ ಎರಡು ಸಿಲಿಂಡರ್ ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ ಹೋಟೆಲ್ ಹೊತ್ತಿ ಉರಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ…
ಆದಿ ಉಡುಪಿ ಎಪಿಎಂಸಿ ಮಾರುಕಟ್ಟೆಯ ಹಿಂಭಾಗದ ಖಾಸಗಿ ಸ್ಥಳದಲ್ಲಿದ್ದರುವ ಪಾಳುಬಾವಿಯಲ್ಲಿ ಕೊಳೆತಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮೃತದೇಹ…
ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ…
ಮುಂಡತಿಕ್ಕೋಡುವಿನ ಪಟಾಕಿ ಸಂಗ್ರಹಣಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 14 ಜನರು ಸಾವನ್ನಪ್ಪಿದ ನಂತರ, ತ್ರಿಶೂರ್ ಪೂರಂ ಉತ್ಸವದ ಪಟಾಕಿ…