ಕಳೆದ ವಾರ ಸುರಿದ ಭಾರೀ ಮಳೆಗೆ ಪುತ್ತೂರು ತಾಲೂಕಿನ ಕೋಡಿಂಬಾಡಿ, ಬೆಳ್ಳಿಪ್ಪಾಡಿ, 34ನೇ ನೆಕ್ಕಿಲಾಡಿ, ಉಪ್ಪಿನಂಗಡಿ, ಹಿರೇಬಂಡಾಡಿ, ಬಜತ್ತೂರು ಗ್ರಾಮದಲ್ಲಿ ತೀವ್ರ ತರದ ಭೂಕುಸಿತ ಉಂಟಾಗಿದ್ದು, ಬೆಳ್ಳಿಪ್ಪಾಡಿ ಗ್ರಾಮದಲ್ಲಿ 5 ಮನೆಗಳಿಗೆ ಭಾಗಶಃ ಹಾನಿಯಾಗಿದೆ.
ನಷ್ಟಕ್ಕೊಳಗಾದ ಮನೆಗಳಿಗೆ ಪರಿಹಾರ ಕೊಡುವಲ್ಲಿ ಜಿಲ್ಲಾಡಳಿತ ಸಂಪೂರ್ಣ ನಿಷ್ಟ್ರೀಯವಾಗಿದ್ದು, ಕ್ಷೇತ್ರದ ಶಾಸಕರು ಬೆಳ್ಳಿಪ್ಪಾಡಿಗೆ ಬಂದು ಮಾಧ್ಯಮದ ಮುಂದೆ ಪೋಸ್ ಕೊಡುವ ಕೆಲಸ ಮಾಡಿದ್ದಾರೆ. ಹೊರತು ಪರಿಹಾರ ಕೊಡಿಸುವ ಕೆಲಸ ಈವರೆಗೆ ಮಾಡಿಲ್ಲ ಎಂದು ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ್ ಅತ್ರಮಜಲು ಆರೋಪಿಸಿದ್ದಾರೆ. ಇವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈ ಗ್ರಾಮಗಳ ಪ್ರದೇಶದಲ್ಲಿ ಸುಮಾರು 60 ರಷ್ಟು ಮನೆಗಳ ಮುಂದೆ ಗುಡ್ಡ ಜರಿದು ಬಿದ್ದಿದ್ದು, 12 ಕಡೆಗಳಲ್ಲಿ ರಸ್ತೆ ಬದಿ ದರೆ ಕುಸಿದು ಹಾನಿಯಾಗಿದೆ. ಸುಮಾರು ಎರಡು ಸಾವಿರಕ್ಕೂ ಮಿಕ್ಕಿ ಅಡಕೆ ಮರಗಳು ಧರಶಾಹಿಯಾಗಿದೆ. 10 ಕಿ.ಮೀ. ಕೃಷಿ ನಾಶವಾಗಿದೆ. ರಸ್ತೆಗಳಿಗೂ ಹಾನಿಯಾಗಿದೆ. ಬಜತ್ತೂರಿನಲ್ಲಿ ಮೂರು ಮನೆಗಳು ಭಾಗಶಃ ಹಾನಿಯಾಗಿದ್ದು, 18 ಮನೆಗಳಿಗೆ ಧರೆ ಕುಸಿದು ಬಿದ್ದಿದೆ. ಒಟ್ಟಾರೆಯಾಗಿ ಕೊಡಗಿನಲ್ಲಿ ನಡೆದ ಪ್ರಾಕೃತಿಕ ವಿಕೋಪದಷ್ಟೇ ಇಲ್ಲಿಯೂ ಆಗಿದ್ದು, ಸುಮಾರು 25 ಕೋಟಿಗೂ ಮಿಕ್ಕಿ ಹಾನಿಯಾಗಿದೆ ಎಂದಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…