ಕಳೆದ ವಾರ ಸುರಿದ ಭಾರೀ ಮಳೆಗೆ ಪುತ್ತೂರು ತಾಲೂಕಿನ ಕೋಡಿಂಬಾಡಿ, ಬೆಳ್ಳಿಪ್ಪಾಡಿ, 34ನೇ ನೆಕ್ಕಿಲಾಡಿ, ಉಪ್ಪಿನಂಗಡಿ, ಹಿರೇಬಂಡಾಡಿ, ಬಜತ್ತೂರು ಗ್ರಾಮದಲ್ಲಿ ತೀವ್ರ ತರದ ಭೂಕುಸಿತ ಉಂಟಾಗಿದ್ದು, ಬೆಳ್ಳಿಪ್ಪಾಡಿ ಗ್ರಾಮದಲ್ಲಿ 5 ಮನೆಗಳಿಗೆ ಭಾಗಶಃ ಹಾನಿಯಾಗಿದೆ.
ನಷ್ಟಕ್ಕೊಳಗಾದ ಮನೆಗಳಿಗೆ ಪರಿಹಾರ ಕೊಡುವಲ್ಲಿ ಜಿಲ್ಲಾಡಳಿತ ಸಂಪೂರ್ಣ ನಿಷ್ಟ್ರೀಯವಾಗಿದ್ದು, ಕ್ಷೇತ್ರದ ಶಾಸಕರು ಬೆಳ್ಳಿಪ್ಪಾಡಿಗೆ ಬಂದು ಮಾಧ್ಯಮದ ಮುಂದೆ ಪೋಸ್ ಕೊಡುವ ಕೆಲಸ ಮಾಡಿದ್ದಾರೆ. ಹೊರತು ಪರಿಹಾರ ಕೊಡಿಸುವ ಕೆಲಸ ಈವರೆಗೆ ಮಾಡಿಲ್ಲ ಎಂದು ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ್ ಅತ್ರಮಜಲು ಆರೋಪಿಸಿದ್ದಾರೆ. ಇವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈ ಗ್ರಾಮಗಳ ಪ್ರದೇಶದಲ್ಲಿ ಸುಮಾರು 60 ರಷ್ಟು ಮನೆಗಳ ಮುಂದೆ ಗುಡ್ಡ ಜರಿದು ಬಿದ್ದಿದ್ದು, 12 ಕಡೆಗಳಲ್ಲಿ ರಸ್ತೆ ಬದಿ ದರೆ ಕುಸಿದು ಹಾನಿಯಾಗಿದೆ. ಸುಮಾರು ಎರಡು ಸಾವಿರಕ್ಕೂ ಮಿಕ್ಕಿ ಅಡಕೆ ಮರಗಳು ಧರಶಾಹಿಯಾಗಿದೆ. 10 ಕಿ.ಮೀ. ಕೃಷಿ ನಾಶವಾಗಿದೆ. ರಸ್ತೆಗಳಿಗೂ ಹಾನಿಯಾಗಿದೆ. ಬಜತ್ತೂರಿನಲ್ಲಿ ಮೂರು ಮನೆಗಳು ಭಾಗಶಃ ಹಾನಿಯಾಗಿದ್ದು, 18 ಮನೆಗಳಿಗೆ ಧರೆ ಕುಸಿದು ಬಿದ್ದಿದೆ. ಒಟ್ಟಾರೆಯಾಗಿ ಕೊಡಗಿನಲ್ಲಿ ನಡೆದ ಪ್ರಾಕೃತಿಕ ವಿಕೋಪದಷ್ಟೇ ಇಲ್ಲಿಯೂ ಆಗಿದ್ದು, ಸುಮಾರು 25 ಕೋಟಿಗೂ ಮಿಕ್ಕಿ ಹಾನಿಯಾಗಿದೆ ಎಂದಿದ್ದಾರೆ.
ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ…
ಎರಡು ದಿನಗಳ ಹಿಂದೆ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ…
ಹೋಟೆಲ್ನಲ್ಲಿದ್ದ ಎರಡು ಸಿಲಿಂಡರ್ ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ ಹೋಟೆಲ್ ಹೊತ್ತಿ ಉರಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ…
ಆದಿ ಉಡುಪಿ ಎಪಿಎಂಸಿ ಮಾರುಕಟ್ಟೆಯ ಹಿಂಭಾಗದ ಖಾಸಗಿ ಸ್ಥಳದಲ್ಲಿದ್ದರುವ ಪಾಳುಬಾವಿಯಲ್ಲಿ ಕೊಳೆತಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮೃತದೇಹ…
ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ…
ಮುಂಡತಿಕ್ಕೋಡುವಿನ ಪಟಾಕಿ ಸಂಗ್ರಹಣಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 14 ಜನರು ಸಾವನ್ನಪ್ಪಿದ ನಂತರ, ತ್ರಿಶೂರ್ ಪೂರಂ ಉತ್ಸವದ ಪಟಾಕಿ…