ಕಳೆದ ವಾರ ಸುರಿದ ಭಾರೀ ಮಳೆಗೆ ಪುತ್ತೂರು ತಾಲೂಕಿನ ಕೋಡಿಂಬಾಡಿ, ಬೆಳ್ಳಿಪ್ಪಾಡಿ, 34ನೇ ನೆಕ್ಕಿಲಾಡಿ, ಉಪ್ಪಿನಂಗಡಿ, ಹಿರೇಬಂಡಾಡಿ, ಬಜತ್ತೂರು ಗ್ರಾಮದಲ್ಲಿ ತೀವ್ರ ತರದ ಭೂಕುಸಿತ ಉಂಟಾಗಿದ್ದು, ಬೆಳ್ಳಿಪ್ಪಾಡಿ ಗ್ರಾಮದಲ್ಲಿ 5 ಮನೆಗಳಿಗೆ ಭಾಗಶಃ ಹಾನಿಯಾಗಿದೆ.
ನಷ್ಟಕ್ಕೊಳಗಾದ ಮನೆಗಳಿಗೆ ಪರಿಹಾರ ಕೊಡುವಲ್ಲಿ ಜಿಲ್ಲಾಡಳಿತ ಸಂಪೂರ್ಣ ನಿಷ್ಟ್ರೀಯವಾಗಿದ್ದು, ಕ್ಷೇತ್ರದ ಶಾಸಕರು ಬೆಳ್ಳಿಪ್ಪಾಡಿಗೆ ಬಂದು ಮಾಧ್ಯಮದ ಮುಂದೆ ಪೋಸ್ ಕೊಡುವ ಕೆಲಸ ಮಾಡಿದ್ದಾರೆ. ಹೊರತು ಪರಿಹಾರ ಕೊಡಿಸುವ ಕೆಲಸ ಈವರೆಗೆ ಮಾಡಿಲ್ಲ ಎಂದು ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ್ ಅತ್ರಮಜಲು ಆರೋಪಿಸಿದ್ದಾರೆ. ಇವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈ ಗ್ರಾಮಗಳ ಪ್ರದೇಶದಲ್ಲಿ ಸುಮಾರು 60 ರಷ್ಟು ಮನೆಗಳ ಮುಂದೆ ಗುಡ್ಡ ಜರಿದು ಬಿದ್ದಿದ್ದು, 12 ಕಡೆಗಳಲ್ಲಿ ರಸ್ತೆ ಬದಿ ದರೆ ಕುಸಿದು ಹಾನಿಯಾಗಿದೆ. ಸುಮಾರು ಎರಡು ಸಾವಿರಕ್ಕೂ ಮಿಕ್ಕಿ ಅಡಕೆ ಮರಗಳು ಧರಶಾಹಿಯಾಗಿದೆ. 10 ಕಿ.ಮೀ. ಕೃಷಿ ನಾಶವಾಗಿದೆ. ರಸ್ತೆಗಳಿಗೂ ಹಾನಿಯಾಗಿದೆ. ಬಜತ್ತೂರಿನಲ್ಲಿ ಮೂರು ಮನೆಗಳು ಭಾಗಶಃ ಹಾನಿಯಾಗಿದ್ದು, 18 ಮನೆಗಳಿಗೆ ಧರೆ ಕುಸಿದು ಬಿದ್ದಿದೆ. ಒಟ್ಟಾರೆಯಾಗಿ ಕೊಡಗಿನಲ್ಲಿ ನಡೆದ ಪ್ರಾಕೃತಿಕ ವಿಕೋಪದಷ್ಟೇ ಇಲ್ಲಿಯೂ ಆಗಿದ್ದು, ಸುಮಾರು 25 ಕೋಟಿಗೂ ಮಿಕ್ಕಿ ಹಾನಿಯಾಗಿದೆ ಎಂದಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…