ಬಜೆ ಡ್ಯಾಂನಿ0ದ ಉಡುಪಿ ನಗರಕ್ಕೆ ನೀರು ಪೂರೈಸುವ ಜವಾಬ್ದಾರಿ ಹಾಗೂ ನಿರ್ವಹಣೆಯನ್ನು ವಾರಾಹಿ ನೀರು ಸರಬರಾಜು ಗುತ್ತಿಗೆ ಸಂಸ್ಥೆಯಾದ ಸುಯೆಝ್ ಪ್ರೊಜೆಕ್ಟ್ ಅವರಿಗೆ ಹಸ್ತಾಂತರಿಸಲು ಉಡುಪಿ ನಗರಸಭೆಯಿಂದ ನಿರ್ಧರಿಸಲಾಗಿದೆ. ಉಡುಪಿ ನಗರಕ್ಕೆ ವಾರಾಹಿ ನೀರು ಸರಬರಾಜು ಸಂಬ0ಧ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ನಡೆದ ವಾರಾಹಿ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಮಾಡಲಾಯಿತು.
ಅದರಂತೆ ಮೂರು ತಿಂಗಳುಗಳ ಕಾಲ ಪ್ರಾಯೋಗಿಕವಾಗಿ ನೀರು ಪೂರೈಸಲು ಜವಾಬ್ದಾರಿಯನ್ನು ಸುಯೆಝ್ ಪ್ರೋಜೆಕ್ಟ್ನವರಿಗೆ ವಹಿಸಿಕೊಡಲಾಯಿತು. ಈ ಬಗ್ಗೆ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿದ್ದಾರೆ. ಬಳಿಕ ವಾರಾಹಿ ನೀರು ಪೂರೈಕೆಯ ಗುತ್ತಿಗೆ ಸಂಸ್ಥೆಯ ಪ್ರಾಜೆಕ್ಟ್ ಮ್ಯಾನೇಜರ್ ಸುದೀಪ್ ಮಾತನಾಡಿ, ವಾರಾಹಿ ನೀರು ಸರಬರಾಜು ಮತ್ತು ನಿರ್ವಹಣೆ ಯನ್ನು ನಮಗೆ ಎಂಟು ವರ್ಷಗಳಿಗೆ ನೀಡಿದ್ದು, ಇದೀಗ ಬಜೆಯಿಂದ ನೀರು ಪೂರೈಕೆ ಮಾಡುವ ಜವಾಬ್ದಾರಿಯನ್ನು ಕೂಡ ಕೂಡಲೇ ನೀಡಬೇಕು. ಇಲ್ಲಿರುವ ಎಲ್ಲ ಸಮಸ್ಯೆಗಳನ್ನು ಸರಿಪಡಿಸಿ ದಿನ 24ಗಂಟೆ ನೀರು ಪೂರೈಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…