ಬಜೆ ಡ್ಯಾಂನಿ0ದ ಉಡುಪಿ ನಗರಕ್ಕೆ ನೀರು ಪೂರೈಸುವ ಜವಾಬ್ದಾರಿ ಹಾಗೂ ನಿರ್ವಹಣೆಯನ್ನು ವಾರಾಹಿ ನೀರು ಸರಬರಾಜು ಗುತ್ತಿಗೆ ಸಂಸ್ಥೆಯಾದ ಸುಯೆಝ್ ಪ್ರೊಜೆಕ್ಟ್ ಅವರಿಗೆ ಹಸ್ತಾಂತರಿಸಲು ಉಡುಪಿ ನಗರಸಭೆಯಿಂದ ನಿರ್ಧರಿಸಲಾಗಿದೆ. ಉಡುಪಿ ನಗರಕ್ಕೆ ವಾರಾಹಿ ನೀರು ಸರಬರಾಜು ಸಂಬ0ಧ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ನಡೆದ ವಾರಾಹಿ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಮಾಡಲಾಯಿತು.
ಅದರಂತೆ ಮೂರು ತಿಂಗಳುಗಳ ಕಾಲ ಪ್ರಾಯೋಗಿಕವಾಗಿ ನೀರು ಪೂರೈಸಲು ಜವಾಬ್ದಾರಿಯನ್ನು ಸುಯೆಝ್ ಪ್ರೋಜೆಕ್ಟ್ನವರಿಗೆ ವಹಿಸಿಕೊಡಲಾಯಿತು. ಈ ಬಗ್ಗೆ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿದ್ದಾರೆ. ಬಳಿಕ ವಾರಾಹಿ ನೀರು ಪೂರೈಕೆಯ ಗುತ್ತಿಗೆ ಸಂಸ್ಥೆಯ ಪ್ರಾಜೆಕ್ಟ್ ಮ್ಯಾನೇಜರ್ ಸುದೀಪ್ ಮಾತನಾಡಿ, ವಾರಾಹಿ ನೀರು ಸರಬರಾಜು ಮತ್ತು ನಿರ್ವಹಣೆ ಯನ್ನು ನಮಗೆ ಎಂಟು ವರ್ಷಗಳಿಗೆ ನೀಡಿದ್ದು, ಇದೀಗ ಬಜೆಯಿಂದ ನೀರು ಪೂರೈಕೆ ಮಾಡುವ ಜವಾಬ್ದಾರಿಯನ್ನು ಕೂಡ ಕೂಡಲೇ ನೀಡಬೇಕು. ಇಲ್ಲಿರುವ ಎಲ್ಲ ಸಮಸ್ಯೆಗಳನ್ನು ಸರಿಪಡಿಸಿ ದಿನ 24ಗಂಟೆ ನೀರು ಪೂರೈಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…