ಬಜೆ ಡ್ಯಾಂನಿ0ದ ಉಡುಪಿ ನಗರಕ್ಕೆ ನೀರು ಪೂರೈಸುವ ಜವಾಬ್ದಾರಿ ಹಾಗೂ ನಿರ್ವಹಣೆಯನ್ನು ವಾರಾಹಿ ನೀರು ಸರಬರಾಜು ಗುತ್ತಿಗೆ ಸಂಸ್ಥೆಯಾದ ಸುಯೆಝ್ ಪ್ರೊಜೆಕ್ಟ್ ಅವರಿಗೆ ಹಸ್ತಾಂತರಿಸಲು ಉಡುಪಿ ನಗರಸಭೆಯಿಂದ ನಿರ್ಧರಿಸಲಾಗಿದೆ. ಉಡುಪಿ ನಗರಕ್ಕೆ ವಾರಾಹಿ ನೀರು ಸರಬರಾಜು ಸಂಬ0ಧ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ನಡೆದ ವಾರಾಹಿ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಮಾಡಲಾಯಿತು.
ಅದರಂತೆ ಮೂರು ತಿಂಗಳುಗಳ ಕಾಲ ಪ್ರಾಯೋಗಿಕವಾಗಿ ನೀರು ಪೂರೈಸಲು ಜವಾಬ್ದಾರಿಯನ್ನು ಸುಯೆಝ್ ಪ್ರೋಜೆಕ್ಟ್ನವರಿಗೆ ವಹಿಸಿಕೊಡಲಾಯಿತು. ಈ ಬಗ್ಗೆ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿದ್ದಾರೆ. ಬಳಿಕ ವಾರಾಹಿ ನೀರು ಪೂರೈಕೆಯ ಗುತ್ತಿಗೆ ಸಂಸ್ಥೆಯ ಪ್ರಾಜೆಕ್ಟ್ ಮ್ಯಾನೇಜರ್ ಸುದೀಪ್ ಮಾತನಾಡಿ, ವಾರಾಹಿ ನೀರು ಸರಬರಾಜು ಮತ್ತು ನಿರ್ವಹಣೆ ಯನ್ನು ನಮಗೆ ಎಂಟು ವರ್ಷಗಳಿಗೆ ನೀಡಿದ್ದು, ಇದೀಗ ಬಜೆಯಿಂದ ನೀರು ಪೂರೈಕೆ ಮಾಡುವ ಜವಾಬ್ದಾರಿಯನ್ನು ಕೂಡ ಕೂಡಲೇ ನೀಡಬೇಕು. ಇಲ್ಲಿರುವ ಎಲ್ಲ ಸಮಸ್ಯೆಗಳನ್ನು ಸರಿಪಡಿಸಿ ದಿನ 24ಗಂಟೆ ನೀರು ಪೂರೈಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ…
ಎರಡು ದಿನಗಳ ಹಿಂದೆ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ…
ಹೋಟೆಲ್ನಲ್ಲಿದ್ದ ಎರಡು ಸಿಲಿಂಡರ್ ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ ಹೋಟೆಲ್ ಹೊತ್ತಿ ಉರಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ…
ಆದಿ ಉಡುಪಿ ಎಪಿಎಂಸಿ ಮಾರುಕಟ್ಟೆಯ ಹಿಂಭಾಗದ ಖಾಸಗಿ ಸ್ಥಳದಲ್ಲಿದ್ದರುವ ಪಾಳುಬಾವಿಯಲ್ಲಿ ಕೊಳೆತಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮೃತದೇಹ…
ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ…
ಮುಂಡತಿಕ್ಕೋಡುವಿನ ಪಟಾಕಿ ಸಂಗ್ರಹಣಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 14 ಜನರು ಸಾವನ್ನಪ್ಪಿದ ನಂತರ, ತ್ರಿಶೂರ್ ಪೂರಂ ಉತ್ಸವದ ಪಟಾಕಿ…