ಕರಾವಳಿ ಜಿಲ್ಲೆಗಳಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಿಂದುತ್ವಕ್ಕಾಗಿ ಕೆಲಸ ಮಾಡಿದವರನ್ನು ಗಡಿಪಾರು ಮಾಡುವ ಹಾಗೂ ಎಫ್ಐಆರ್ ದಾಖಲಿಸುವ ಪ್ರಯತ್ನವನ್ನು ಮಾಡುತ್ತಿದೆ. ಸಿದ್ಧರಾಮಯ್ಯ ಸರಕಾರದ ನಿರ್ದೇಶನದ ಮೇರೆಗೆ ಪೊಲೀಸರು ಈ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಭಾವನೆ ವ್ಯಕ್ತಪಡಿಸಿದ, ಕಾರ್ಯಕ್ರಮಗಳಲ್ಲಿ ಭಾಷಣ ಮಾಡಿದ ಹಿಂದೂ ಸಂಘಟನೆಗಳ ಪ್ರಮುಖರಿಗೆ ನೋಟೀಸ್ ನೀಡುವ ಮೂಲಕ ಸರಕಾರ ದಬ್ಬಾಳಿಕೆ ನಡೆಸುತ್ತಿದೆ. ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಶ್ರೀಕಾಂತ್ ಶೆಟ್ಟಿ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಎಲ್ಲ ಪ್ರಕ್ರಿಯೆ ಗಮನಿಸಿದರೆ ಇದು ಔರಂಗಜೇಬನ ತುಘಲಕ್ ದರ್ಬಾರ್ನಂತೆ ಕಾಣುತ್ತಿದೆ. ಕಾಂಗ್ರೆಸ್ ಸರಕಾರದಿಂದ ರಾಜ್ಯದಲ್ಲಿ ಹಿಂದುಗಳಿಗೆ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಇಲ್ಲಿ ಅವಕಾಶ ಇಲ್ಲವಾಗಿದೆ. ಇದನ್ನು ಸರಕಾರ ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ಇದರ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ವಿಜಯ ಕುಮಾರ್ ಉದ್ಯಾವರ, ಗಿರೀಶ್ ಅಂಚನ್, ಶ್ರೀನಿಧಿ ಹೆಗ್ಡೆ, ದಿನೇಶ್ ಅಮೀನ್, ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…