ಕರಾವಳಿ ಜಿಲ್ಲೆಗಳಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಿಂದುತ್ವಕ್ಕಾಗಿ ಕೆಲಸ ಮಾಡಿದವರನ್ನು ಗಡಿಪಾರು ಮಾಡುವ ಹಾಗೂ ಎಫ್ಐಆರ್ ದಾಖಲಿಸುವ ಪ್ರಯತ್ನವನ್ನು ಮಾಡುತ್ತಿದೆ. ಸಿದ್ಧರಾಮಯ್ಯ ಸರಕಾರದ ನಿರ್ದೇಶನದ ಮೇರೆಗೆ ಪೊಲೀಸರು ಈ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಭಾವನೆ ವ್ಯಕ್ತಪಡಿಸಿದ, ಕಾರ್ಯಕ್ರಮಗಳಲ್ಲಿ ಭಾಷಣ ಮಾಡಿದ ಹಿಂದೂ ಸಂಘಟನೆಗಳ ಪ್ರಮುಖರಿಗೆ ನೋಟೀಸ್ ನೀಡುವ ಮೂಲಕ ಸರಕಾರ ದಬ್ಬಾಳಿಕೆ ನಡೆಸುತ್ತಿದೆ. ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಶ್ರೀಕಾಂತ್ ಶೆಟ್ಟಿ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಎಲ್ಲ ಪ್ರಕ್ರಿಯೆ ಗಮನಿಸಿದರೆ ಇದು ಔರಂಗಜೇಬನ ತುಘಲಕ್ ದರ್ಬಾರ್ನಂತೆ ಕಾಣುತ್ತಿದೆ. ಕಾಂಗ್ರೆಸ್ ಸರಕಾರದಿಂದ ರಾಜ್ಯದಲ್ಲಿ ಹಿಂದುಗಳಿಗೆ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಇಲ್ಲಿ ಅವಕಾಶ ಇಲ್ಲವಾಗಿದೆ. ಇದನ್ನು ಸರಕಾರ ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ಇದರ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ವಿಜಯ ಕುಮಾರ್ ಉದ್ಯಾವರ, ಗಿರೀಶ್ ಅಂಚನ್, ಶ್ರೀನಿಧಿ ಹೆಗ್ಡೆ, ದಿನೇಶ್ ಅಮೀನ್, ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…