ಜನ ಮನದ ನಾಡಿ ಮಿಡಿತ

Advertisement

ಹಿಂದೂ ಸಂಘಟನೆಯ ಮೂವರು ಕಾರ್ಯಕರ್ತರ ಗಡಿಪಾರಿಗೆ ಸಿದ್ದತೆ

ದಕ್ಷಿಣ ಕನ್ನಡ :  ನೈತಿಕ ಪೊಲೀಸ್ ಗಿರಿ ಪ್ರಕರಣಗಳಿಗೆ ಸಂಬಂಧಿಸಿ ಮೂವರು ಬಜರಂಗದಳ ಕಾರ್ಯಕರ್ತರಿಗೆ ಮಂಗಳೂರು ನಗರ ಪೊಲೀಸರು ಗಡಿಪಾರು ಕಾರಣ ಕೇಳಿ  ನೋಟಿಸ್ ನೀಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
 ಅಪರಾಧ ಹಿನ್ನೆಲೆ ಉಳ್ಳ ಮೂರು ವ್ಯಕ್ತಿಗಳನ್ನು  ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಮಂಗಳೂರು ನಗರ ಕಾ‌ನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ.
ನೋಟಿಸ್‌ಗೆ ಎದ್ರಿದಾರರಿಂದ  ಉತ್ತರ ಬಂದ ಬಳಿಕ ಮೂವರನ್ನು ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಆದೇಶ ಮಾಡುವ ಸಾಧ್ಯತೆ ಇದೆ ಎಂದು ನಂಬಲರ್ಹ  ಮೂಲಗಳು ತಿಳಿಸಿವೆ 
 ನೈತಿಕ ಪೊಲೀಸ್ ಗಿರಿ ಕೇಸ್ ನಲ್ಲಿ ಈ  ಮೂವರು ಭಾಗಿಯಾಗಿದ್ದರು. ಸುಲ್ತಾನ್ ಜ್ಯುವೆಲ್ಲರಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ನಡೆಸಿದ್ದಾಗಿ ಇವರ ಮೇಲೆ ಆರೋಪವಿತ್ತು . ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್ ಗಳೂ ಗಡೀಪಾರಿಗೆ ವರದಿ ನೀಡಿದ್ದರು. ಹೀಗಾಗಿ ಕಾನೂನು ಪ್ರಕಾರ ಗಡೀಪಾರು ಅಸ್ತ್ರ ಪ್ರಯೋಗ ಮಾಡಲು ಯೋಚಿಸಿದ್ದು  ,ಇದೀಗ ನೋಟಿಸ್ ನೀಡಿ ಗಡೀಪಾರು ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಸಮಾಜದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು ಇವರುಗಳನ್ನು ಚಟುವಟಿಕೆಗಳ ತಾಣದಿಂದ ಮತ್ತು ಅಪರಾಧ ಸಂಬಂಧದಿಂದ  ದೂರ ಇಟ್ಟು ಅಪರಾಧ ಚಟುವಟಕೆಗಳಗೆ ಕಡಿವಾಣ ಹಾಕಲು ಆರೋಪಿತರನ್ನು ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗೆ ಗಡಿಪಾರು ಮಾಡುವುದು ಸೂಕ್ತ ಹಾಗೂ ಅನಿವಾರ್ಯ ಎಂದು ಸ್ಥಳೀಯ  ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ವರದಿ ಸಲ್ಲಿಸಿದ್ದಾರೆ.
ಇಂತಹ ಅಪರಾಧ ಹಿನ್ನೆಲೆಯುಳ್ಳ ಎದುರುದಾರನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಕ್ಷಣದಲ್ಲಾದರೂ   ಅಪರಾಧಗಳನ್ನು ಎಸಗುವುದು, ಅಂಥ ಅಪರಾಧಗಳಿಗೆ ಪರೋಕ್ಷವಾಗಿ ಸಹಾಯ ಮಾಡಿ ದುಷ್ಪ್ರೇರಣಿ ನೀಡುವುದರಿಂದ ಸಾರ್ವಜನಿಕರಲ್ಲಿ ಭಯ ಭೀತಿಯನ್ನುಂಟು ಮಾಡುವ ಸಾಧ್ಯತೆಯು ಇರುತ್ತದೆ. ಇಂತಹ ಅಪರಾಧ ಹಿನ್ನಲೆ ಇರುವವರನ್ನು ಕಾನೂನು ಮೂಲಕ ಸೂಕ್ತ ರೀತಿಯಲ್ಲಿ ಹದ್ದುಬಸ್ತಿನಲ್ಲಿಡದೇ ಹಾಗೇ ಬಿಟ್ಟಲ್ಲಿ ಅಪರಾಧ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಯಾವುದೇ ಸಾಕ್ಷಿದಾರರು ಮತ್ತು ದೂರುದಾರರಲ್ಲಿ ತನ್ನ ಮೇಲೆ ದಾಖಲಾದ ಕ್ರಿಮಿನಲ್ ಪ್ರಕರಣಗಳಿಂದ ಬಿಡುಗಡೆಯಾಗಲು ಪ್ರಯತ್ನಿಸಿರುವ ಸಾಧ್ಯತೆಯೂ ಇದೆ ಎಂದು ನೊಟೀಸ್‌ ನಲ್ಲಿ ತಿಳಿಸಲಾಗಿದೆ, ಮತ್ತು ಈ ಎಲ್ಲಾ ವಿಚಾರಗಳನ್ನು ನ್ಯಾಯಾಲಯದ ಮುಂದೆ ತರುವ ಸಾಧ್ಯತೆ ಇದೆ.
ನಿರಂತರವಾಗಿ ಕ್ರೈಂ ಮಾಡುತ್ತಿರುವ ಅಪರಾಧಿಗಳಿಗೆ ಗಡಿಪಾರು ಮಾಡುವ ಪ್ರಕ್ರಿಯೆ ಮಾಡಲಾಗುತ್ತಿದೆ. ಈಗಾಗಲೇ 60 ಮಂದಿಯನ್ನು ಗಡಿಪಾರು ಮಾಡಲಾಗಿದೆ. ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಮೂವರಿಗೆ ನೋಟಿಸ್ ನೀಡಲಾಗಿದ್ದು, ಗಡಿಪಾರು ಪ್ರಕ್ರಿಯೆ ಮಾಡಲಾಗುತ್ತಿದೆ ಎಂದು  ಮಾಧ್ಯಮಗಳಲ್ಲಿ ವರದಿಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!