ಇತರೆ

ಹಿಂದೂ ಸಂಘಟನೆಯ ಮೂವರು ಕಾರ್ಯಕರ್ತರ ಗಡಿಪಾರಿಗೆ ಸಿದ್ದತೆ

ದಕ್ಷಿಣ ಕನ್ನಡ :  ನೈತಿಕ ಪೊಲೀಸ್ ಗಿರಿ ಪ್ರಕರಣಗಳಿಗೆ ಸಂಬಂಧಿಸಿ ಮೂವರು ಬಜರಂಗದಳ ಕಾರ್ಯಕರ್ತರಿಗೆ ಮಂಗಳೂರು ನಗರ ಪೊಲೀಸರು ಗಡಿಪಾರು ಕಾರಣ ಕೇಳಿ  ನೋಟಿಸ್ ನೀಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
 ಅಪರಾಧ ಹಿನ್ನೆಲೆ ಉಳ್ಳ ಮೂರು ವ್ಯಕ್ತಿಗಳನ್ನು  ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಮಂಗಳೂರು ನಗರ ಕಾ‌ನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ.
ನೋಟಿಸ್‌ಗೆ ಎದ್ರಿದಾರರಿಂದ  ಉತ್ತರ ಬಂದ ಬಳಿಕ ಮೂವರನ್ನು ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಆದೇಶ ಮಾಡುವ ಸಾಧ್ಯತೆ ಇದೆ ಎಂದು ನಂಬಲರ್ಹ  ಮೂಲಗಳು ತಿಳಿಸಿವೆ 
 ನೈತಿಕ ಪೊಲೀಸ್ ಗಿರಿ ಕೇಸ್ ನಲ್ಲಿ ಈ  ಮೂವರು ಭಾಗಿಯಾಗಿದ್ದರು. ಸುಲ್ತಾನ್ ಜ್ಯುವೆಲ್ಲರಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ನಡೆಸಿದ್ದಾಗಿ ಇವರ ಮೇಲೆ ಆರೋಪವಿತ್ತು . ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್ ಗಳೂ ಗಡೀಪಾರಿಗೆ ವರದಿ ನೀಡಿದ್ದರು. ಹೀಗಾಗಿ ಕಾನೂನು ಪ್ರಕಾರ ಗಡೀಪಾರು ಅಸ್ತ್ರ ಪ್ರಯೋಗ ಮಾಡಲು ಯೋಚಿಸಿದ್ದು  ,ಇದೀಗ ನೋಟಿಸ್ ನೀಡಿ ಗಡೀಪಾರು ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಸಮಾಜದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು ಇವರುಗಳನ್ನು ಚಟುವಟಿಕೆಗಳ ತಾಣದಿಂದ ಮತ್ತು ಅಪರಾಧ ಸಂಬಂಧದಿಂದ  ದೂರ ಇಟ್ಟು ಅಪರಾಧ ಚಟುವಟಕೆಗಳಗೆ ಕಡಿವಾಣ ಹಾಕಲು ಆರೋಪಿತರನ್ನು ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗೆ ಗಡಿಪಾರು ಮಾಡುವುದು ಸೂಕ್ತ ಹಾಗೂ ಅನಿವಾರ್ಯ ಎಂದು ಸ್ಥಳೀಯ  ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ವರದಿ ಸಲ್ಲಿಸಿದ್ದಾರೆ.
ಇಂತಹ ಅಪರಾಧ ಹಿನ್ನೆಲೆಯುಳ್ಳ ಎದುರುದಾರನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಕ್ಷಣದಲ್ಲಾದರೂ   ಅಪರಾಧಗಳನ್ನು ಎಸಗುವುದು, ಅಂಥ ಅಪರಾಧಗಳಿಗೆ ಪರೋಕ್ಷವಾಗಿ ಸಹಾಯ ಮಾಡಿ ದುಷ್ಪ್ರೇರಣಿ ನೀಡುವುದರಿಂದ ಸಾರ್ವಜನಿಕರಲ್ಲಿ ಭಯ ಭೀತಿಯನ್ನುಂಟು ಮಾಡುವ ಸಾಧ್ಯತೆಯು ಇರುತ್ತದೆ. ಇಂತಹ ಅಪರಾಧ ಹಿನ್ನಲೆ ಇರುವವರನ್ನು ಕಾನೂನು ಮೂಲಕ ಸೂಕ್ತ ರೀತಿಯಲ್ಲಿ ಹದ್ದುಬಸ್ತಿನಲ್ಲಿಡದೇ ಹಾಗೇ ಬಿಟ್ಟಲ್ಲಿ ಅಪರಾಧ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಯಾವುದೇ ಸಾಕ್ಷಿದಾರರು ಮತ್ತು ದೂರುದಾರರಲ್ಲಿ ತನ್ನ ಮೇಲೆ ದಾಖಲಾದ ಕ್ರಿಮಿನಲ್ ಪ್ರಕರಣಗಳಿಂದ ಬಿಡುಗಡೆಯಾಗಲು ಪ್ರಯತ್ನಿಸಿರುವ ಸಾಧ್ಯತೆಯೂ ಇದೆ ಎಂದು ನೊಟೀಸ್‌ ನಲ್ಲಿ ತಿಳಿಸಲಾಗಿದೆ, ಮತ್ತು ಈ ಎಲ್ಲಾ ವಿಚಾರಗಳನ್ನು ನ್ಯಾಯಾಲಯದ ಮುಂದೆ ತರುವ ಸಾಧ್ಯತೆ ಇದೆ.
ನಿರಂತರವಾಗಿ ಕ್ರೈಂ ಮಾಡುತ್ತಿರುವ ಅಪರಾಧಿಗಳಿಗೆ ಗಡಿಪಾರು ಮಾಡುವ ಪ್ರಕ್ರಿಯೆ ಮಾಡಲಾಗುತ್ತಿದೆ. ಈಗಾಗಲೇ 60 ಮಂದಿಯನ್ನು ಗಡಿಪಾರು ಮಾಡಲಾಗಿದೆ. ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಮೂವರಿಗೆ ನೋಟಿಸ್ ನೀಡಲಾಗಿದ್ದು, ಗಡಿಪಾರು ಪ್ರಕ್ರಿಯೆ ಮಾಡಲಾಗುತ್ತಿದೆ ಎಂದು  ಮಾಧ್ಯಮಗಳಲ್ಲಿ ವರದಿಯಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…

1 day ago

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…

1 day ago

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…

1 day ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…

1 day ago

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

2 days ago

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…

2 days ago