ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ವ್ಯಕ್ತಿಯೋರ್ವರ ವಿರುದ್ದ ಕ್ರಮಕ್ಕೆ ಪುರಸಭೆ ಕಚೇರಿ ಮುಖ್ಯಾಧಿಕಾರಿಗಳಿಗೆ ಮನವಿ

ಶಿಕ್ಷಣ ಸಂಸ್ಥೆಯೊಂದರ ಹೆಸರಿನಲ್ಲಿ ಕೃಷಿ ಜಾಗಗಳಿಗೆ ಅವೈಜ್ಞಾನಿಕವಾಗಿ ಮಣ್ಣು, ತುಂಬಿಸಿ ಸಾರ್ವಜನಿಕ ರಸ್ತೆಯನ್ನು ಬಂದ್ ಮಾಡಲು ಪ್ರಯತ್ನಿಸುತ್ತಿರುವ ಆರೋಪ ಕೇಳಿಬಂದಿದೆ.

ಹೀಗಾಗಿ ಸಾರ್ವಜನಿಕರು ಈ ಜಮೀನಿಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರ ವಿರುದ್ದ ಕ್ರಮಕ್ಕೆ ಪುರಸಭೆ ಕಚೇರಿ ಮುಖ್ಯಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಪುರಸಭೆ ಕಚೇರಿ ಮುಖ್ಯಅಧಿಕಾರಿಗಳಿಗೆ ದೂರು ನೀಡಿ, ಕ್ರಮ ಕೈಗೊಳ್ಳಲು ಮನವಿ ಮಾಡಿದ ಸಾರ್ವಜನಿಕರು, ಭಂಡಾರಿಬೆಟ್ಟು-ಪರಿಸರದಿ0ದ ಬಂಟ್ವಾಳ ಪೇಟೆ ಮುಖ್ಯ ರಸ್ತೆಗೆ ನಮ್ಮ ದೈನಂದಿನ ಚಟುವಟಿಕೆಗಳಿಗೆ ಸಂಪರ್ಕಿಸುವ ಬಿ.ಮೂಡ ಗ್ರಾಮದ ಸ.ನಂ೩ ರ ಹಿಪ್ಪೆಗಳಲ್ಲಿ ಹಾದು ಬಂದು ಸ.ನಂ.೩/೭ ರ ಮುಖಾ-ಎಸ್.ವಿ.ಎಸ್ ಟೆಂಪಲ್ ಶಾಲೆಗೆ ಸಂಪರ್ಕಿಸುವ ರಸ್ತೆಗೆ ಸಂಪರ್ಕಿಸಿ ಅಲ್ಲಿಂದ ಬಂಟ್ವಾಳ ಮುಖ್ಯ ಪೇಟೆಗೆ ತಲುಪುವುದಾಗಿದೆ.

ಈ ಸಂಪರ್ಕ ರಸ್ತೆಯನ್ನು ಬಂಟ್ವಾಳ ಮುಖ್ಯ ಪೇಟೆಗೆ ತಲುಪಲು ಅನಾದಿ ಕಾಲದಿಂದ ಹಿರಿಯರು ತದ ನಂತರದಲ್ಲಿ ನಾವುಗಳು ಉಪಯೋಗಿಸಿಕೊಂಡು ಬರುತ್ತಿರುವುದಾಗಿದೆ. ಭಂಡಾರಿಬೆಟ್ಟು ಪರಿಸರದ ಸಾರ್ವಜನಿಕರು ಶಾಲಾ ಮಕ್ಕಳು ಪೇಟೆಗೆ ಹೋಗಿ ಬರಲು ಇರುವ ಏಕೈಕ ರಸ್ತೆ ಇದಾಗಿದೆ. ವ್ಯವಹಾರಿಕವಾಗಿ ಲಾಭಗಳಿಸುವ ದುರುದ್ದೇಶದಿಂದ ಅಭಿವೃದ್ಧಿ ಪಡಿಸುವ ಜವಾಬ್ದಾರಿ ತೆಗೆದುಕೊಂಡಿರುವ ವ್ಯಕ್ತಿ ಅನಧಿಕೃತವಾಗಿ ಎಲ್ಲೆಂದರಲ್ಲಿ ಕೃಷಿ -ಮಣ್ಣು ತುಂಬಿಸಿ ಮಳೆ ನೀರು ತೋಡುಗಳನ್ನು ಮುಚ್ಚಿರುತ್ತಾರೆ. ನಾವುಗಳು ದಿನನಿತ್ಯ ಪೇಟೆ ಪರಿಸರಕ್ಕೆ ಸಂಪರ್ಕಿಸಲು ಉಪಯೋಗಿಸಿಕೊಂಡು ಬರುತ್ತಿರುವ ಸಾರ್ವಜನಿಕ ಮಾರ್ಗವನ್ನು ಬಂದ್ ಮಾಡಲು ಮಣ್ಣು ಹಾಕಲು ಪ್ರಯತ್ನಿಸುತ್ತಿದ್ದು, ಹೀಗಾಗಿ ರಸ್ತೆ ಬಂದು ಮಾಡಿದಂತೆ ತಡೆಗಟ್ಟಬೇಕಾಗಿ ಸಾರ್ವಜನಿಕರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!