ಇತರೆ

ಬಂಟ್ವಾಳ: ವ್ಯಕ್ತಿಯೋರ್ವರ ವಿರುದ್ದ ಕ್ರಮಕ್ಕೆ ಪುರಸಭೆ ಕಚೇರಿ ಮುಖ್ಯಾಧಿಕಾರಿಗಳಿಗೆ ಮನವಿ

ಶಿಕ್ಷಣ ಸಂಸ್ಥೆಯೊಂದರ ಹೆಸರಿನಲ್ಲಿ ಕೃಷಿ ಜಾಗಗಳಿಗೆ ಅವೈಜ್ಞಾನಿಕವಾಗಿ ಮಣ್ಣು, ತುಂಬಿಸಿ ಸಾರ್ವಜನಿಕ ರಸ್ತೆಯನ್ನು ಬಂದ್ ಮಾಡಲು ಪ್ರಯತ್ನಿಸುತ್ತಿರುವ ಆರೋಪ ಕೇಳಿಬಂದಿದೆ.

ಹೀಗಾಗಿ ಸಾರ್ವಜನಿಕರು ಈ ಜಮೀನಿಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರ ವಿರುದ್ದ ಕ್ರಮಕ್ಕೆ ಪುರಸಭೆ ಕಚೇರಿ ಮುಖ್ಯಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಪುರಸಭೆ ಕಚೇರಿ ಮುಖ್ಯಅಧಿಕಾರಿಗಳಿಗೆ ದೂರು ನೀಡಿ, ಕ್ರಮ ಕೈಗೊಳ್ಳಲು ಮನವಿ ಮಾಡಿದ ಸಾರ್ವಜನಿಕರು, ಭಂಡಾರಿಬೆಟ್ಟು-ಪರಿಸರದಿ0ದ ಬಂಟ್ವಾಳ ಪೇಟೆ ಮುಖ್ಯ ರಸ್ತೆಗೆ ನಮ್ಮ ದೈನಂದಿನ ಚಟುವಟಿಕೆಗಳಿಗೆ ಸಂಪರ್ಕಿಸುವ ಬಿ.ಮೂಡ ಗ್ರಾಮದ ಸ.ನಂ೩ ರ ಹಿಪ್ಪೆಗಳಲ್ಲಿ ಹಾದು ಬಂದು ಸ.ನಂ.೩/೭ ರ ಮುಖಾ-ಎಸ್.ವಿ.ಎಸ್ ಟೆಂಪಲ್ ಶಾಲೆಗೆ ಸಂಪರ್ಕಿಸುವ ರಸ್ತೆಗೆ ಸಂಪರ್ಕಿಸಿ ಅಲ್ಲಿಂದ ಬಂಟ್ವಾಳ ಮುಖ್ಯ ಪೇಟೆಗೆ ತಲುಪುವುದಾಗಿದೆ.

ಈ ಸಂಪರ್ಕ ರಸ್ತೆಯನ್ನು ಬಂಟ್ವಾಳ ಮುಖ್ಯ ಪೇಟೆಗೆ ತಲುಪಲು ಅನಾದಿ ಕಾಲದಿಂದ ಹಿರಿಯರು ತದ ನಂತರದಲ್ಲಿ ನಾವುಗಳು ಉಪಯೋಗಿಸಿಕೊಂಡು ಬರುತ್ತಿರುವುದಾಗಿದೆ. ಭಂಡಾರಿಬೆಟ್ಟು ಪರಿಸರದ ಸಾರ್ವಜನಿಕರು ಶಾಲಾ ಮಕ್ಕಳು ಪೇಟೆಗೆ ಹೋಗಿ ಬರಲು ಇರುವ ಏಕೈಕ ರಸ್ತೆ ಇದಾಗಿದೆ. ವ್ಯವಹಾರಿಕವಾಗಿ ಲಾಭಗಳಿಸುವ ದುರುದ್ದೇಶದಿಂದ ಅಭಿವೃದ್ಧಿ ಪಡಿಸುವ ಜವಾಬ್ದಾರಿ ತೆಗೆದುಕೊಂಡಿರುವ ವ್ಯಕ್ತಿ ಅನಧಿಕೃತವಾಗಿ ಎಲ್ಲೆಂದರಲ್ಲಿ ಕೃಷಿ -ಮಣ್ಣು ತುಂಬಿಸಿ ಮಳೆ ನೀರು ತೋಡುಗಳನ್ನು ಮುಚ್ಚಿರುತ್ತಾರೆ. ನಾವುಗಳು ದಿನನಿತ್ಯ ಪೇಟೆ ಪರಿಸರಕ್ಕೆ ಸಂಪರ್ಕಿಸಲು ಉಪಯೋಗಿಸಿಕೊಂಡು ಬರುತ್ತಿರುವ ಸಾರ್ವಜನಿಕ ಮಾರ್ಗವನ್ನು ಬಂದ್ ಮಾಡಲು ಮಣ್ಣು ಹಾಕಲು ಪ್ರಯತ್ನಿಸುತ್ತಿದ್ದು, ಹೀಗಾಗಿ ರಸ್ತೆ ಬಂದು ಮಾಡಿದಂತೆ ತಡೆಗಟ್ಟಬೇಕಾಗಿ ಸಾರ್ವಜನಿಕರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದೆ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸ್ಕೂಟರ್ ಸವಾರನೋರ್ವನನ್ನು ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿ ನಿವಾಸಿ…

2 hours ago

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…

19 hours ago

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…

19 hours ago

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…

19 hours ago

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ…

21 hours ago

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ, ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಎಮ್ಮೆ ಕೊಪ್ಪಲು…

21 hours ago