ಶಿಕ್ಷಣ ಸಂಸ್ಥೆಯೊಂದರ ಹೆಸರಿನಲ್ಲಿ ಕೃಷಿ ಜಾಗಗಳಿಗೆ ಅವೈಜ್ಞಾನಿಕವಾಗಿ ಮಣ್ಣು, ತುಂಬಿಸಿ ಸಾರ್ವಜನಿಕ ರಸ್ತೆಯನ್ನು ಬಂದ್ ಮಾಡಲು ಪ್ರಯತ್ನಿಸುತ್ತಿರುವ ಆರೋಪ ಕೇಳಿಬಂದಿದೆ.
ಹೀಗಾಗಿ ಸಾರ್ವಜನಿಕರು ಈ ಜಮೀನಿಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರ ವಿರುದ್ದ ಕ್ರಮಕ್ಕೆ ಪುರಸಭೆ ಕಚೇರಿ ಮುಖ್ಯಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಪುರಸಭೆ ಕಚೇರಿ ಮುಖ್ಯಅಧಿಕಾರಿಗಳಿಗೆ ದೂರು ನೀಡಿ, ಕ್ರಮ ಕೈಗೊಳ್ಳಲು ಮನವಿ ಮಾಡಿದ ಸಾರ್ವಜನಿಕರು, ಭಂಡಾರಿಬೆಟ್ಟು-ಪರಿಸರದಿ0ದ ಬಂಟ್ವಾಳ ಪೇಟೆ ಮುಖ್ಯ ರಸ್ತೆಗೆ ನಮ್ಮ ದೈನಂದಿನ ಚಟುವಟಿಕೆಗಳಿಗೆ ಸಂಪರ್ಕಿಸುವ ಬಿ.ಮೂಡ ಗ್ರಾಮದ ಸ.ನಂ೩ ರ ಹಿಪ್ಪೆಗಳಲ್ಲಿ ಹಾದು ಬಂದು ಸ.ನಂ.೩/೭ ರ ಮುಖಾ-ಎಸ್.ವಿ.ಎಸ್ ಟೆಂಪಲ್ ಶಾಲೆಗೆ ಸಂಪರ್ಕಿಸುವ ರಸ್ತೆಗೆ ಸಂಪರ್ಕಿಸಿ ಅಲ್ಲಿಂದ ಬಂಟ್ವಾಳ ಮುಖ್ಯ ಪೇಟೆಗೆ ತಲುಪುವುದಾಗಿದೆ.
ಈ ಸಂಪರ್ಕ ರಸ್ತೆಯನ್ನು ಬಂಟ್ವಾಳ ಮುಖ್ಯ ಪೇಟೆಗೆ ತಲುಪಲು ಅನಾದಿ ಕಾಲದಿಂದ ಹಿರಿಯರು ತದ ನಂತರದಲ್ಲಿ ನಾವುಗಳು ಉಪಯೋಗಿಸಿಕೊಂಡು ಬರುತ್ತಿರುವುದಾಗಿದೆ. ಭಂಡಾರಿಬೆಟ್ಟು ಪರಿಸರದ ಸಾರ್ವಜನಿಕರು ಶಾಲಾ ಮಕ್ಕಳು ಪೇಟೆಗೆ ಹೋಗಿ ಬರಲು ಇರುವ ಏಕೈಕ ರಸ್ತೆ ಇದಾಗಿದೆ. ವ್ಯವಹಾರಿಕವಾಗಿ ಲಾಭಗಳಿಸುವ ದುರುದ್ದೇಶದಿಂದ ಅಭಿವೃದ್ಧಿ ಪಡಿಸುವ ಜವಾಬ್ದಾರಿ ತೆಗೆದುಕೊಂಡಿರುವ ವ್ಯಕ್ತಿ ಅನಧಿಕೃತವಾಗಿ ಎಲ್ಲೆಂದರಲ್ಲಿ ಕೃಷಿ -ಮಣ್ಣು ತುಂಬಿಸಿ ಮಳೆ ನೀರು ತೋಡುಗಳನ್ನು ಮುಚ್ಚಿರುತ್ತಾರೆ. ನಾವುಗಳು ದಿನನಿತ್ಯ ಪೇಟೆ ಪರಿಸರಕ್ಕೆ ಸಂಪರ್ಕಿಸಲು ಉಪಯೋಗಿಸಿಕೊಂಡು ಬರುತ್ತಿರುವ ಸಾರ್ವಜನಿಕ ಮಾರ್ಗವನ್ನು ಬಂದ್ ಮಾಡಲು ಮಣ್ಣು ಹಾಕಲು ಪ್ರಯತ್ನಿಸುತ್ತಿದ್ದು, ಹೀಗಾಗಿ ರಸ್ತೆ ಬಂದು ಮಾಡಿದಂತೆ ತಡೆಗಟ್ಟಬೇಕಾಗಿ ಸಾರ್ವಜನಿಕರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…