ರಾಜ್ಯ ಸರಕಾರ ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳನ್ನು, ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕುವ ಕಾರ್ಯಕ್ಕೆ ಇಳಿದಿದೆ, ನಿಮ್ಮ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೂಗಳ ಮೇಲೆ ಸವಾರಿ ಮಾಡಿ, ನಮ್ಮನ್ನು ಕೆಣಕಿದರೆ ನಾವು ಸಮ್ಮನೆ ಇರುವುದಿಲ್ಲ, ನಿಮ್ಮ ಷಡ್ಯಂತರಕ್ಕೆ ತಕ್ಕ ಉತ್ತರ ನೀಡಿಯೇ ನೀಡುತ್ತೇವೆ ಎಂದು ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದ್ದಾರೆ.
ಇವರು ಕಡಬ ಠಾಣೆಯ ಎದರು ಹಿಂದೂ ಕಾರ್ಯಕರ್ತರ ಮನೆಗೆ ಕಡಬ ಪೋಲೀಸರು ರಾತ್ರಿ ತೆರಳಿ ಜಿಪಿಎಸ್ ಫೊಟೋ ತೆಗೆದುದಲ್ಲದೆ, ಇದನ್ನು ಪ್ರಶ್ನಿಸಿದ ಹಿಂದೂ ಕಾರ್ಯಕರ್ತರ ಮೇಲೆ ಸೊಮೊಟೋ ಕೇಸ್ ದಾಖಲಿಸಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ರು. ಯಾವುದೇ ಪ್ರಕರಣಗಳಿಲ್ಲದ ಕಾರ್ಯಕರ್ತ ಪುನೀತ್ ಅವರ ಮನೆಗೆ ತಡ ರಾತ್ರಿ ನುಗ್ಗಿರುವ ಇಲ್ಲಿನ ಠಾಣಾಧಿಕಾರಿ ಅಕ್ಷಯ್ ಡವಗಿ ನಿನ್ನ ಮೇಲೆ ರೌಡಿಶೀಟರ್ ಓಪನ್ ಮಾಡುತ್ತೇನೆ ಎಂದು ದಮ್ಕಿ ಹಾಕುತ್ತಾರೆ. ಹಿಂದೂ ಸಮಾಜದ ರಕ್ಷಣೆಗೆ ಕೆಲಸ ಮಾಡುವ ಕಾರ್ಯಕರ್ತರನ್ನು ರೌಡಿಶೀಟರ್ ಮಾಡುವುದಿದ್ದರೆ ನೀವು ಸಂವಿಧಾನ ರಕ್ಷಣೆ ಮಾಡುತ್ತೀರಾ ಅಥವಾ ಯಾರದ್ದೂ ಒತ್ತಡಕ್ಕೆ ಮಣಿದು , ದುಡ್ಡಿನ ಆಸೆಗೆ, ಭಡ್ತಿಗೋಸ್ಕರ ಈ ಕಾರ್ಯ ಮಾಡುತ್ತೀರಾ ಎಂದು ಮುರಳಿಕೃಷ್ಣ ಹಸಂತಡ್ಕ ತೀವ್ರವಾಗಿ ಪ್ರಶ್ನಿಸಿದ್ದಾರೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…