ರಾಜ್ಯ ಸರಕಾರ ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳನ್ನು, ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕುವ ಕಾರ್ಯಕ್ಕೆ ಇಳಿದಿದೆ, ನಿಮ್ಮ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೂಗಳ ಮೇಲೆ ಸವಾರಿ ಮಾಡಿ, ನಮ್ಮನ್ನು ಕೆಣಕಿದರೆ ನಾವು ಸಮ್ಮನೆ ಇರುವುದಿಲ್ಲ, ನಿಮ್ಮ ಷಡ್ಯಂತರಕ್ಕೆ ತಕ್ಕ ಉತ್ತರ ನೀಡಿಯೇ ನೀಡುತ್ತೇವೆ ಎಂದು ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದ್ದಾರೆ.
ಇವರು ಕಡಬ ಠಾಣೆಯ ಎದರು ಹಿಂದೂ ಕಾರ್ಯಕರ್ತರ ಮನೆಗೆ ಕಡಬ ಪೋಲೀಸರು ರಾತ್ರಿ ತೆರಳಿ ಜಿಪಿಎಸ್ ಫೊಟೋ ತೆಗೆದುದಲ್ಲದೆ, ಇದನ್ನು ಪ್ರಶ್ನಿಸಿದ ಹಿಂದೂ ಕಾರ್ಯಕರ್ತರ ಮೇಲೆ ಸೊಮೊಟೋ ಕೇಸ್ ದಾಖಲಿಸಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ರು. ಯಾವುದೇ ಪ್ರಕರಣಗಳಿಲ್ಲದ ಕಾರ್ಯಕರ್ತ ಪುನೀತ್ ಅವರ ಮನೆಗೆ ತಡ ರಾತ್ರಿ ನುಗ್ಗಿರುವ ಇಲ್ಲಿನ ಠಾಣಾಧಿಕಾರಿ ಅಕ್ಷಯ್ ಡವಗಿ ನಿನ್ನ ಮೇಲೆ ರೌಡಿಶೀಟರ್ ಓಪನ್ ಮಾಡುತ್ತೇನೆ ಎಂದು ದಮ್ಕಿ ಹಾಕುತ್ತಾರೆ. ಹಿಂದೂ ಸಮಾಜದ ರಕ್ಷಣೆಗೆ ಕೆಲಸ ಮಾಡುವ ಕಾರ್ಯಕರ್ತರನ್ನು ರೌಡಿಶೀಟರ್ ಮಾಡುವುದಿದ್ದರೆ ನೀವು ಸಂವಿಧಾನ ರಕ್ಷಣೆ ಮಾಡುತ್ತೀರಾ ಅಥವಾ ಯಾರದ್ದೂ ಒತ್ತಡಕ್ಕೆ ಮಣಿದು , ದುಡ್ಡಿನ ಆಸೆಗೆ, ಭಡ್ತಿಗೋಸ್ಕರ ಈ ಕಾರ್ಯ ಮಾಡುತ್ತೀರಾ ಎಂದು ಮುರಳಿಕೃಷ್ಣ ಹಸಂತಡ್ಕ ತೀವ್ರವಾಗಿ ಪ್ರಶ್ನಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…