ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಅಪರೇಷನ್ ಸಿಂಧೂರ್‌ನಲ್ಲಿ ಭಾಗವಹಿಸಿದ್ದ ಸೈನಿಕನಿಗೆ ಗೌರವ

ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಾದ ಬಳಿಕ ಭಾರತೀಯ ಸೇನೆ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಉಗ್ರರ ಮೇಲೆ ದಾಳಿ ನಡೆಸಿದೆ. ಸೇನೆಯ ಈ ದಿಟ್ಟ ಉತ್ತರಕ್ಕೆ ದೇಶ ಮಾತ್ರವಲ್ಲದೆ, ಇಡೀ ವಿಶ್ವದಿಂದಲೇ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

ಈ ಸಾಹಸಮಯ ಕಾರ್ಯಾಚರಣೆಯಲ್ಲಿ ತೊಡಗಿಕೊಂಡ ಸೈನಿಕರ ಗೌರವ ಸಾರ್ವಜನಿಕ ವಲಯದಲ್ಲಿ ದುಪ್ಪಟ್ಟಾಗಿದೆ. ಕಾರ್ಯಾಚರಣೆಯಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಭಾಗಿಯಾದ ಸೈನಿಕರನ್ನು ಗೌರವಿಸೋದೇ ಇಂದು ಭಾರತೀಯರ ಒಂದು ಸುಯೋಗ. ಅಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾಗವಹಿಸಕದ್ದ ದಕ್ಷಿಣಕನ್ನಡ ಜಿಲ್ಲೆಯ ಸಿಂದಗಿ ಕೆಮ್ಮಾಯಿಯ ಪದ್ಮನಾಭ ಗೌಡರನ್ನು ಗೌರವಿಸುವ ಕಾರ್ಯಕ್ರಮವೊಂದು ಪುತ್ತೂರಿನಲ್ಲಿ ನಡೆದಿದೆ. ಅತ್ಯಂತ ರಹಸ್ಯವಾಗಿ ಪ್ಲಾನ್ ಮಾಡಿ ಮಾಡಿದ ಕಾರ್ಯಾಚರಣೆಯ ಬಳಿಕ ಸೈನಿಕರಿಗೆ ಕೆಲವು ದಿನಗಳ ಆರಾಮವನ್ನು ನೀಡಲಾಗಿದ್ದು, ಇದೇ ರೀತಿ ಮನೆಗೆ ಬಂದ ಪದ್ಮನಾಭ ಗೌಡರಿಗೆ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಗೌರವ ಸಲ್ಲಿಸಲಾಗಿದೆ. ಪುತ್ತೂರಿನ ಪ್ರತಿಷ್ಠಿತ ಮನೆತನಕ್ಕೆ ಸೇರಿದ ಪದ್ಮನಾಭ ಗೌಡರ ಕುಟುಂಬದ ಮೂವರು ಸದಸ್ಯರು ಭಾರತೀಯ ಸೇನೆಯಲ್ಲಿ ದುಡಿದವರಾಗಿದ್ದು, ಎಳವೆಯಿಂದಲೇ ಭಾರತದ ಸೈನ್ಯದಲ್ಲಿ ಸೇರಬೇಕೆನ್ನುವ ಇಚ್ಛೆ ಪದ್ಮನಾಭ ಗೌಡರದ್ದಾಗಿತ್ತು. ತಮ್ಮ ಇಚ್ಛೆಯನ್ನು ಸುಮಾರು ೪೦ ವರ್ಷಗಳ ಹಿಂದೆಯೇ ಪೂರೈಸಿಕೊಂಡಿರುವ ಪದ್ಮನಾಭ ಗೌಡರು ಮುಂದೆಯೂ ದೇಶಕ್ಕಾಗಿ ದುಡಿಯಲು ಸಿದ್ಧವಾಗಿದ್ದಾರೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!