ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಾದ ಬಳಿಕ ಭಾರತೀಯ ಸೇನೆ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಉಗ್ರರ ಮೇಲೆ ದಾಳಿ ನಡೆಸಿದೆ. ಸೇನೆಯ ಈ ದಿಟ್ಟ ಉತ್ತರಕ್ಕೆ ದೇಶ ಮಾತ್ರವಲ್ಲದೆ, ಇಡೀ ವಿಶ್ವದಿಂದಲೇ ಭಾರೀ ಪ್ರಶಂಸೆ ವ್ಯಕ್ತವಾಗಿದೆ.
ಈ ಸಾಹಸಮಯ ಕಾರ್ಯಾಚರಣೆಯಲ್ಲಿ ತೊಡಗಿಕೊಂಡ ಸೈನಿಕರ ಗೌರವ ಸಾರ್ವಜನಿಕ ವಲಯದಲ್ಲಿ ದುಪ್ಪಟ್ಟಾಗಿದೆ. ಕಾರ್ಯಾಚರಣೆಯಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಭಾಗಿಯಾದ ಸೈನಿಕರನ್ನು ಗೌರವಿಸೋದೇ ಇಂದು ಭಾರತೀಯರ ಒಂದು ಸುಯೋಗ. ಅಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾಗವಹಿಸಕದ್ದ ದಕ್ಷಿಣಕನ್ನಡ ಜಿಲ್ಲೆಯ ಸಿಂದಗಿ ಕೆಮ್ಮಾಯಿಯ ಪದ್ಮನಾಭ ಗೌಡರನ್ನು ಗೌರವಿಸುವ ಕಾರ್ಯಕ್ರಮವೊಂದು ಪುತ್ತೂರಿನಲ್ಲಿ ನಡೆದಿದೆ. ಅತ್ಯಂತ ರಹಸ್ಯವಾಗಿ ಪ್ಲಾನ್ ಮಾಡಿ ಮಾಡಿದ ಕಾರ್ಯಾಚರಣೆಯ ಬಳಿಕ ಸೈನಿಕರಿಗೆ ಕೆಲವು ದಿನಗಳ ಆರಾಮವನ್ನು ನೀಡಲಾಗಿದ್ದು, ಇದೇ ರೀತಿ ಮನೆಗೆ ಬಂದ ಪದ್ಮನಾಭ ಗೌಡರಿಗೆ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಗೌರವ ಸಲ್ಲಿಸಲಾಗಿದೆ. ಪುತ್ತೂರಿನ ಪ್ರತಿಷ್ಠಿತ ಮನೆತನಕ್ಕೆ ಸೇರಿದ ಪದ್ಮನಾಭ ಗೌಡರ ಕುಟುಂಬದ ಮೂವರು ಸದಸ್ಯರು ಭಾರತೀಯ ಸೇನೆಯಲ್ಲಿ ದುಡಿದವರಾಗಿದ್ದು, ಎಳವೆಯಿಂದಲೇ ಭಾರತದ ಸೈನ್ಯದಲ್ಲಿ ಸೇರಬೇಕೆನ್ನುವ ಇಚ್ಛೆ ಪದ್ಮನಾಭ ಗೌಡರದ್ದಾಗಿತ್ತು. ತಮ್ಮ ಇಚ್ಛೆಯನ್ನು ಸುಮಾರು ೪೦ ವರ್ಷಗಳ ಹಿಂದೆಯೇ ಪೂರೈಸಿಕೊಂಡಿರುವ ಪದ್ಮನಾಭ ಗೌಡರು ಮುಂದೆಯೂ ದೇಶಕ್ಕಾಗಿ ದುಡಿಯಲು ಸಿದ್ಧವಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂದೂ ವಿರೋಧಿ ಬೆಳವಣಿಗೆಗಳನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ…
ಮಂಗಳೂರಿನಿಂದ ಜಮ್ಮು ಕತ್ರಾಕ್ಕೆ ಸಂಚರಿಸುತ್ತಿದ್ದ ನವಯುಗ ಎಕ್ಸ್ಪ್ರೆಸ್ ರೈಲು ಸ್ಥಗಿತಗೊಂಡು ಐದು ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ರೈಲು ಸೇವೆಯನ್ನು ಪುನರಾರಂಭಿಸುವಂತೆ…
ತುಳುನಾಡಿನ ಯುವಕರು ಹಿಂದು - ಮುಸ್ಲಿಂ ಎಂದು ಬಿಸಿ ಬಿಸಿ ವಾಗ್ವಾದದಲ್ಲಿ ತೊಡಗಿದ್ದರೆ, ಕುಪ್ಪೆಪದವು ಗ್ರಾಮ ಪಂಚಾಯತ್ ಮುಂಭಾಗ ಮಂಜೂರಾದ…
ಮಂಗಳೂರು ನಗರದ ಅತ್ಯಂತ ವಾಹನ ದಟ್ಟನೆಯ ಪ್ರದೇಶವಾದ ನಂತೂರು ಜಂಕ್ಷನ್ನಲ್ಲಿ ವಾಹನಗಳಿಗೆ ಫ್ರೀ ಲೆಫ್ಟ್ ಅಂದರೆ ಎಡಭಾಗದಲ್ಲಿ ತಿರುವು ತೆಗೆದುಕೊಂಡು…
ಮಾನವೀಯತೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದ್ದಾರೆ. ಜಯಶ್ರೀಕೃಷ್ಣ…
ಸಾಲು ಸಾಲು ದುರಂತ ಸಂಭವಿಸಿದರು ಪ್ರವಾಸಿಗರು ಮಾತ್ರ ಎಚ್ಚೆತ್ತೊಕೊಳ್ಳುತ್ತಿಲ್ಲ. ಅಪಾಯದ ಎಚ್ಚರಿಕೆ ಕೊಟ್ರೂ ಡೊಂಟ್ ಕೇರ್ ಎನ್ನದ ಪ್ರವಾಸಿಗರು ಹುಚ್ಚಾಟ…