ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಾದ ಬಳಿಕ ಭಾರತೀಯ ಸೇನೆ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಉಗ್ರರ ಮೇಲೆ ದಾಳಿ ನಡೆಸಿದೆ. ಸೇನೆಯ ಈ ದಿಟ್ಟ ಉತ್ತರಕ್ಕೆ ದೇಶ ಮಾತ್ರವಲ್ಲದೆ, ಇಡೀ ವಿಶ್ವದಿಂದಲೇ ಭಾರೀ ಪ್ರಶಂಸೆ ವ್ಯಕ್ತವಾಗಿದೆ.
ಈ ಸಾಹಸಮಯ ಕಾರ್ಯಾಚರಣೆಯಲ್ಲಿ ತೊಡಗಿಕೊಂಡ ಸೈನಿಕರ ಗೌರವ ಸಾರ್ವಜನಿಕ ವಲಯದಲ್ಲಿ ದುಪ್ಪಟ್ಟಾಗಿದೆ. ಕಾರ್ಯಾಚರಣೆಯಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಭಾಗಿಯಾದ ಸೈನಿಕರನ್ನು ಗೌರವಿಸೋದೇ ಇಂದು ಭಾರತೀಯರ ಒಂದು ಸುಯೋಗ. ಅಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾಗವಹಿಸಕದ್ದ ದಕ್ಷಿಣಕನ್ನಡ ಜಿಲ್ಲೆಯ ಸಿಂದಗಿ ಕೆಮ್ಮಾಯಿಯ ಪದ್ಮನಾಭ ಗೌಡರನ್ನು ಗೌರವಿಸುವ ಕಾರ್ಯಕ್ರಮವೊಂದು ಪುತ್ತೂರಿನಲ್ಲಿ ನಡೆದಿದೆ. ಅತ್ಯಂತ ರಹಸ್ಯವಾಗಿ ಪ್ಲಾನ್ ಮಾಡಿ ಮಾಡಿದ ಕಾರ್ಯಾಚರಣೆಯ ಬಳಿಕ ಸೈನಿಕರಿಗೆ ಕೆಲವು ದಿನಗಳ ಆರಾಮವನ್ನು ನೀಡಲಾಗಿದ್ದು, ಇದೇ ರೀತಿ ಮನೆಗೆ ಬಂದ ಪದ್ಮನಾಭ ಗೌಡರಿಗೆ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಗೌರವ ಸಲ್ಲಿಸಲಾಗಿದೆ. ಪುತ್ತೂರಿನ ಪ್ರತಿಷ್ಠಿತ ಮನೆತನಕ್ಕೆ ಸೇರಿದ ಪದ್ಮನಾಭ ಗೌಡರ ಕುಟುಂಬದ ಮೂವರು ಸದಸ್ಯರು ಭಾರತೀಯ ಸೇನೆಯಲ್ಲಿ ದುಡಿದವರಾಗಿದ್ದು, ಎಳವೆಯಿಂದಲೇ ಭಾರತದ ಸೈನ್ಯದಲ್ಲಿ ಸೇರಬೇಕೆನ್ನುವ ಇಚ್ಛೆ ಪದ್ಮನಾಭ ಗೌಡರದ್ದಾಗಿತ್ತು. ತಮ್ಮ ಇಚ್ಛೆಯನ್ನು ಸುಮಾರು ೪೦ ವರ್ಷಗಳ ಹಿಂದೆಯೇ ಪೂರೈಸಿಕೊಂಡಿರುವ ಪದ್ಮನಾಭ ಗೌಡರು ಮುಂದೆಯೂ ದೇಶಕ್ಕಾಗಿ ದುಡಿಯಲು ಸಿದ್ಧವಾಗಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…