ಕ್ಷುಲ್ಲಕ ಕಾರಣಕ್ಕೆ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆಗೆ ಸಂಬ0ಧಿಸಿದ0ತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಲೂರು ಗ್ರಾಮದ ಪ್ರದೀಪ್ ಪೂಜಾರಿ ಬಂಧಿತ ಆರೋಪಿಯಾಗಿದ್ದಾನೆ. ಜೂ. ೨ರಂದು ಈತ ಹಾಗೂ ಇತರ ಐದು ಮಂದಿ ಆಲೂರು -ಕುಂದಾಪುರ ಮಾರ್ಗದಲ್ಲಿ ಸಂಚರಿಸುವ ಜಯದುರ್ಗಾ ಬಸ್ಗೆ ಆಲೂರು ಗ್ರಾಮದ ಹೊಯಿಗೆಹರ ಬಸ್ ನಿಲ್ದಾಣದಲ್ಲಿ ಹತ್ತಿದ್ದಾರೆ. ಬಳಿಕ ನಿರ್ವಾಹಕ ಗಣೇಶ್ ಜೊತೆ ಜಗಳವಾಡಿ, ಅವರ ಶರ್ಟ್ ಕಾಲರ್ ಪಟ್ಟಿಯನ್ನು ಹಿಡಿದು, ಕೈಯಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಗಣೇಶ್ ಅವರ ಎದೆಗೆ ಕಾಲಿನಿಂದ ತುಳಿದು, ಅವರ ಕೈಯಲ್ಲಿದ್ದ ಬ್ಯಾಗ್ನಿಂದ ಸುಮಾರು ೧೫,೭೦೦ ರೂ. ಹಣವನ್ನು ಕಸಿದುಕೊಂಡು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು ಆರೋಪಿ ಪ್ರದೀಪ್ ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…