ಜನ ಮನದ ನಾಡಿ ಮಿಡಿತ

Advertisement

ಉಪ್ಪಿನಂಗಡಿ: ಕುಡಿಯುವ ನೀರಿನ ಟ್ಯಾಂಕ್‌ನ ತಳಭಾಗದಲ್ಲಿ ಕಸದ ರಾಶಿ..!

ಉಪ್ಪಿನಂಗಡಿಯ ನಟ್ಟಿಬೈಲ್ ನಲ್ಲಿರುವ ಗ್ರಾ.ಪಂ.ನ ಕುಡಿಯುವ ನೀರಿನ ಟ್ಯಾಂಕ್‌ನ ತಳಭಾಗದಲ್ಲಿ ರಟ್ಟಿನ ಬಾಕ್ಸ್, ಕಬ್ಬಿಣದ ರಾಡ್, ಗುಟ್ಕಾ ಪ್ಯಾಕೇಟ್‌ಗಳು ಸೇರಿದಂತೆ ರಾಶಿಗಟ್ಟಲೆ ಕಸವಿರುವುದು ಪತ್ತೆಯಾಗಿದೆ.

ಕಳೆದ ಒಂದು ವರ್ಷದಿಂದ ಇದೇ ಟ್ಯಾಂಕ್‌ನ ನೀರು ಕುಡಿಯುತ್ತಿರುವ ನಟ್ಟಿಬೈಲ್ ಪರಿಸರದ ನಿವಾಸಿಗಳು ಅಧಿಕಾರಿಗಳ ಬೇಜವಾಬ್ದಾರಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಜೀವನ್ ಮೆಷಿನ್ ಯೋಜನೆಯಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ನಟ್ಟಿಬೈಲ್‌ನಲ್ಲಿ ಕುಡಿಯುವ ನೀರಿನ ಟ್ಯಾಂಕ್‌ವೊ0ದನ್ನು ನಿರ್ಮಿಸಿತ್ತು.

ಇದರ ಕಾಮಗಾರಿ ಮುಗಿದ ಬಳಿಕ ಅಂದರೆ ಸುಮಾರು ಒಂದು ವರ್ಷಗಳ ಹಿಂದೆ ಇದನ್ನು ಗ್ರಾ.ಪಂ.ಗೆ ಹಸ್ತಾಂತರ ಮಾಡಿತ್ತು. ಈ ಕಾಮಗಾರಿಯ ಸಂದರ್ಭ ರಟ್ಟಿನ ಬಾಕ್‌ಗಳು, ಕಬ್ಬಿಣದ ರಾಡ್‌ಗಳು, ಗುಟ್ಕಾ ಪ್ಯಾಕೇಟ್‌ಗಳು, ಕಾರ್ಡ್ ಬೋರ್ಡ್ಗಳು, ಪ್ಲಾಸ್ಟಿಕ್‌ಗಳು ಸೇರಿದಂತೆ ಇನ್ನಿತರ ಕಸಕಡ್ಡಿ ಗಳು ಟ್ಯಾಂಕ್‌ನೊಳಗಡೆನೇ ಬಾಕಿಯಾಗಿದ್ದು, ಇದನ್ನು ಯಾರೂ ಗಮನಿಸಿರಲಿಲ್ಲ. ಗ್ರಾ.ಪಂ.ನವರು ಇದಕ್ಕೆ ನೀರು ತುಂಬಿಸಿ ನಟ್ಟಿಬೈಲ್ ಪರಿಸರದ ನಿವಾಸಿಗಳ ಮನೆಗಳಿಗೆ ಸರಬರಾಜು ಮಾಡಲು ಆರಂಭಿಸಿತು. ಟ್ಯಾಂಕ್‌ನೊಳಗಿನ ಅಸಲಿಯತ್ತು ತಿಳಿದು ವಾಂತಿ ಮಾಡಿಕೊಳ್ಳುತ್ತಿದ್ದಾರೆ ಗ್ರಾಮಸ್ಥರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!