ಉಪ್ಪಿನಂಗಡಿಯ ನಟ್ಟಿಬೈಲ್ ನಲ್ಲಿರುವ ಗ್ರಾ.ಪಂ.ನ ಕುಡಿಯುವ ನೀರಿನ ಟ್ಯಾಂಕ್ನ ತಳಭಾಗದಲ್ಲಿ ರಟ್ಟಿನ ಬಾಕ್ಸ್, ಕಬ್ಬಿಣದ ರಾಡ್, ಗುಟ್ಕಾ ಪ್ಯಾಕೇಟ್ಗಳು ಸೇರಿದಂತೆ ರಾಶಿಗಟ್ಟಲೆ ಕಸವಿರುವುದು ಪತ್ತೆಯಾಗಿದೆ.
ಕಳೆದ ಒಂದು ವರ್ಷದಿಂದ ಇದೇ ಟ್ಯಾಂಕ್ನ ನೀರು ಕುಡಿಯುತ್ತಿರುವ ನಟ್ಟಿಬೈಲ್ ಪರಿಸರದ ನಿವಾಸಿಗಳು ಅಧಿಕಾರಿಗಳ ಬೇಜವಾಬ್ದಾರಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಜೀವನ್ ಮೆಷಿನ್ ಯೋಜನೆಯಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ನಟ್ಟಿಬೈಲ್ನಲ್ಲಿ ಕುಡಿಯುವ ನೀರಿನ ಟ್ಯಾಂಕ್ವೊ0ದನ್ನು ನಿರ್ಮಿಸಿತ್ತು.
ಇದರ ಕಾಮಗಾರಿ ಮುಗಿದ ಬಳಿಕ ಅಂದರೆ ಸುಮಾರು ಒಂದು ವರ್ಷಗಳ ಹಿಂದೆ ಇದನ್ನು ಗ್ರಾ.ಪಂ.ಗೆ ಹಸ್ತಾಂತರ ಮಾಡಿತ್ತು. ಈ ಕಾಮಗಾರಿಯ ಸಂದರ್ಭ ರಟ್ಟಿನ ಬಾಕ್ಗಳು, ಕಬ್ಬಿಣದ ರಾಡ್ಗಳು, ಗುಟ್ಕಾ ಪ್ಯಾಕೇಟ್ಗಳು, ಕಾರ್ಡ್ ಬೋರ್ಡ್ಗಳು, ಪ್ಲಾಸ್ಟಿಕ್ಗಳು ಸೇರಿದಂತೆ ಇನ್ನಿತರ ಕಸಕಡ್ಡಿ ಗಳು ಟ್ಯಾಂಕ್ನೊಳಗಡೆನೇ ಬಾಕಿಯಾಗಿದ್ದು, ಇದನ್ನು ಯಾರೂ ಗಮನಿಸಿರಲಿಲ್ಲ. ಗ್ರಾ.ಪಂ.ನವರು ಇದಕ್ಕೆ ನೀರು ತುಂಬಿಸಿ ನಟ್ಟಿಬೈಲ್ ಪರಿಸರದ ನಿವಾಸಿಗಳ ಮನೆಗಳಿಗೆ ಸರಬರಾಜು ಮಾಡಲು ಆರಂಭಿಸಿತು. ಟ್ಯಾಂಕ್ನೊಳಗಿನ ಅಸಲಿಯತ್ತು ತಿಳಿದು ವಾಂತಿ ಮಾಡಿಕೊಳ್ಳುತ್ತಿದ್ದಾರೆ ಗ್ರಾಮಸ್ಥರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…