ಉಪ್ಪಿನಂಗಡಿಯ ನಟ್ಟಿಬೈಲ್ ನಲ್ಲಿರುವ ಗ್ರಾ.ಪಂ.ನ ಕುಡಿಯುವ ನೀರಿನ ಟ್ಯಾಂಕ್ನ ತಳಭಾಗದಲ್ಲಿ ರಟ್ಟಿನ ಬಾಕ್ಸ್, ಕಬ್ಬಿಣದ ರಾಡ್, ಗುಟ್ಕಾ ಪ್ಯಾಕೇಟ್ಗಳು ಸೇರಿದಂತೆ ರಾಶಿಗಟ್ಟಲೆ ಕಸವಿರುವುದು ಪತ್ತೆಯಾಗಿದೆ.
ಕಳೆದ ಒಂದು ವರ್ಷದಿಂದ ಇದೇ ಟ್ಯಾಂಕ್ನ ನೀರು ಕುಡಿಯುತ್ತಿರುವ ನಟ್ಟಿಬೈಲ್ ಪರಿಸರದ ನಿವಾಸಿಗಳು ಅಧಿಕಾರಿಗಳ ಬೇಜವಾಬ್ದಾರಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಜೀವನ್ ಮೆಷಿನ್ ಯೋಜನೆಯಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ನಟ್ಟಿಬೈಲ್ನಲ್ಲಿ ಕುಡಿಯುವ ನೀರಿನ ಟ್ಯಾಂಕ್ವೊ0ದನ್ನು ನಿರ್ಮಿಸಿತ್ತು.
ಇದರ ಕಾಮಗಾರಿ ಮುಗಿದ ಬಳಿಕ ಅಂದರೆ ಸುಮಾರು ಒಂದು ವರ್ಷಗಳ ಹಿಂದೆ ಇದನ್ನು ಗ್ರಾ.ಪಂ.ಗೆ ಹಸ್ತಾಂತರ ಮಾಡಿತ್ತು. ಈ ಕಾಮಗಾರಿಯ ಸಂದರ್ಭ ರಟ್ಟಿನ ಬಾಕ್ಗಳು, ಕಬ್ಬಿಣದ ರಾಡ್ಗಳು, ಗುಟ್ಕಾ ಪ್ಯಾಕೇಟ್ಗಳು, ಕಾರ್ಡ್ ಬೋರ್ಡ್ಗಳು, ಪ್ಲಾಸ್ಟಿಕ್ಗಳು ಸೇರಿದಂತೆ ಇನ್ನಿತರ ಕಸಕಡ್ಡಿ ಗಳು ಟ್ಯಾಂಕ್ನೊಳಗಡೆನೇ ಬಾಕಿಯಾಗಿದ್ದು, ಇದನ್ನು ಯಾರೂ ಗಮನಿಸಿರಲಿಲ್ಲ. ಗ್ರಾ.ಪಂ.ನವರು ಇದಕ್ಕೆ ನೀರು ತುಂಬಿಸಿ ನಟ್ಟಿಬೈಲ್ ಪರಿಸರದ ನಿವಾಸಿಗಳ ಮನೆಗಳಿಗೆ ಸರಬರಾಜು ಮಾಡಲು ಆರಂಭಿಸಿತು. ಟ್ಯಾಂಕ್ನೊಳಗಿನ ಅಸಲಿಯತ್ತು ತಿಳಿದು ವಾಂತಿ ಮಾಡಿಕೊಳ್ಳುತ್ತಿದ್ದಾರೆ ಗ್ರಾಮಸ್ಥರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…