ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್ ಮೊಬೈಲ್ ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು ಮೂಲದ ವ್ಯಕ್ತಿಯಾದ್ದಾಗಿದೆ ಎಂದು ಹೇಳಲಾಗಿದೆ. ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರ ಸೊತ್ತುಗಳು ಇದಾಗಿದ್ದು,ಇದನ್ನು ಅಲ್ಲಿಟ್ಟು ಕಾಣೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಮೇಶ್ ರೈ ಅವರು ಇತ್ತೀಚಿಗೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ,ಅಯ್ಕೆಯಾಗಿದ್ದರು.
ಇಂದು ಬೆಳಿಗ್ಗೆ ಸುಮಾರು ೧೧ ಗಂಟೆಯಿ0ದ ಬೈಕ್ ಹಾಗೂ ಸೊತ್ತುಗಳು ಇಲ್ಲಿ ಅನಾಥವಾಗಿ ಕಂಡು ಬಂದಿವೆ ಎಂದು ಸ್ಥಳೀಯರು ಪೋಲೀಸರಿಗೆ ತಿಳಿಸಿದ್ದಾರೆ.
ಸ್ಥಳದಲ್ಲಿ ಸಿಕ್ಕಿದ ಮೊಬೈಲ್ ನಿಂದ ನಂಬರ್ ಪಡೆದು ಪೋನ್ ಮಾಡಿದಾಗ ಇದು ಪುತ್ತೂರು ರಮೇಶ್ ರೈ ಅವರದು ಎಂದು ತಿಳಿದಿದ್ದು, ಮನೆಯವರಿಗೆ ತಿಳಿಸಲಾಗಿದೆ. ಇದೀಗ ಸ್ಥಳದಲ್ಲಿ ರಮೇಶ್ ರೈ ಅವರ ಕುಟುಂಬದ ಸದಸ್ಯರು ಪೋಲೀಸರು ಹಾಗೂ ಸ್ಥಳೀಯರು ಜಮಾಯಿಸಿದ್ದು ಸುತ್ತ ಮುತ್ತಲಿನ ಜಾಗದಲ್ಲಿ ಹುಡುಕಲು ಪ್ರಾರಂಭಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…