ಪಡೀಲ್ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿಗಾಗಿ ಸುಮಾರು ಏಳೆಂಟು ವರ್ಷಗಳ ಹಿಂದೆ ಅಲ್ಲಿದ್ದ ಸುಮಾರು 500ಕ್ಕೂ ಅಧಿಕ ಮರಗಳನ್ನು ತೆರವುಗೊಳಿಸಲಾಗಿತ್ತು. ಇದೀಗ ಪರಿಸರ ದಿನಾಚರಣೆಯ ಪ್ರಯುಕ್ತ ಜಿಲ್ಲೆಯ ಪರಿಸರಾಸಕ್ತ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಗಿಡ ನೆಡುವ ಪ್ರಸಕ್ತ ಸಾಲಿನ `ಹಸಿರು ಕ್ರಾಂತಿ’ ಅಭಿಯಾನಕ್ಕೆ ನೂತನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಲಾಗಿದೆ.
ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಒ ಡಾ. ಆನಂದ್ರವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಈ ಸಂದರ್ಭ ಮಾತನಾಡಿದ ಅವರು, ಪರಿಸರಾಸಕ್ತರಾದ ಡಾ. ಸ್ಮಿತಾ ಹೆಗಡೆ ಅವರ ನೇತೃತ್ವದಲ್ಲಿ `ಅಮರ’ ಎಂಬ ಹೆಸರಿನಡಿ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು ಜಿಲ್ಲೆಯಲ್ಲಿ ಸೂಕ್ತ ಪ್ರದೇಶಗಳನ್ನು ಗುರುತಿಸಿ ಗಿಡ ನೆಟ್ಟು ಪೋಷಿಸುವ ಅಭಿಯಾನವನ್ನು ಹಮ್ಮಿಕೊಂಡಿವೆ. ಮಳೆಗಾಲ ಆರಂಭವಾಗಿದ್ದು, ಇದು ಗಿಡಗಳನ್ನು ನೆಡಲು ಸೂಕ್ತ ಹವಾಮಾನ ಎಂದವರು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್, ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ. ಅರುಣ್ ಕುಮಾರ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…