ಪಡೀಲ್ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿಗಾಗಿ ಸುಮಾರು ಏಳೆಂಟು ವರ್ಷಗಳ ಹಿಂದೆ ಅಲ್ಲಿದ್ದ ಸುಮಾರು 500ಕ್ಕೂ ಅಧಿಕ ಮರಗಳನ್ನು ತೆರವುಗೊಳಿಸಲಾಗಿತ್ತು. ಇದೀಗ ಪರಿಸರ ದಿನಾಚರಣೆಯ ಪ್ರಯುಕ್ತ ಜಿಲ್ಲೆಯ ಪರಿಸರಾಸಕ್ತ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಗಿಡ ನೆಡುವ ಪ್ರಸಕ್ತ ಸಾಲಿನ `ಹಸಿರು ಕ್ರಾಂತಿ’ ಅಭಿಯಾನಕ್ಕೆ ನೂತನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಲಾಗಿದೆ.
ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಒ ಡಾ. ಆನಂದ್ರವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಈ ಸಂದರ್ಭ ಮಾತನಾಡಿದ ಅವರು, ಪರಿಸರಾಸಕ್ತರಾದ ಡಾ. ಸ್ಮಿತಾ ಹೆಗಡೆ ಅವರ ನೇತೃತ್ವದಲ್ಲಿ `ಅಮರ’ ಎಂಬ ಹೆಸರಿನಡಿ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು ಜಿಲ್ಲೆಯಲ್ಲಿ ಸೂಕ್ತ ಪ್ರದೇಶಗಳನ್ನು ಗುರುತಿಸಿ ಗಿಡ ನೆಟ್ಟು ಪೋಷಿಸುವ ಅಭಿಯಾನವನ್ನು ಹಮ್ಮಿಕೊಂಡಿವೆ. ಮಳೆಗಾಲ ಆರಂಭವಾಗಿದ್ದು, ಇದು ಗಿಡಗಳನ್ನು ನೆಡಲು ಸೂಕ್ತ ಹವಾಮಾನ ಎಂದವರು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್, ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ. ಅರುಣ್ ಕುಮಾರ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…