ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ತಂಬಾಕುವಿನ ಬಗ್ಗೆ ಜಾಗೃತಿ..!

ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಪ್ರಾದೇಶಿಕ ಕಚೇರಿ ಮತ್ತು ಒರಾಕಲ್ ಇವರು ಇಂದು ಕೆಎಸ್ ಆರ್‌ಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ, ಸರಕಾರಿ ಪ್ರಥಮ ದರ್ಜೆ ಕಾಲೇಜ್ ವಿಟ್ಲ ಸಮಾಜಕಾರ್ಯ ವಿಭಾಗ ಹಾಗೂ ಎ ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಈ ಎಲ್ಲಾ ಸಂಘ ಸಂಸ್ಥೆಗಳ ಜೊತೆಗೂಡಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಡಾ ಮದ್ನ ಶಿಲ್ಪ ಅವರು ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ವಿದ್ಯಾರ್ಥಿಗಳು ಬೀದಿ ನಾಟಕದ ಮೂಲಕ ತಂಬಾಕುವಿನ ದುಷ್ಪರಿಣಾಮಗಳ ಬಗ್ಗೆ ಅರಿವನ್ನು ಮೂಡಿಸಿದ್ದಾರೆ. ತಂಬಾಕು ಮತ್ತದರ ವಿವಿಧ ಉತ್ಪನ್ನಗಳು ಮನುಕುಲದ ಆರೋಗ್ಯಕ್ಕೆ ಮಾರಕವಾಗಿದೆ. ಕೆಎಸ್‌ಆರ್‌ರ್ಟಿಸಿ ಸಿಬ್ಬಂದಿ ವರ್ಗದವರಿಗೆ ಹಾಗೂ ಡ್ರೈವರ್ ಕಂಡಕ್ಟರ್ಗಳಿಗೆ ಹಾಗೂ ತಾಂತ್ರಿಕ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಬಾಯೊಳಗಿನ ಕ್ಯಾನ್ಸರ್ ಬಗ್ಗೆ ತಪಾಸಣೆ ಹಮ್ಮಿಕೊಳ್ಳಲಾಯಿತು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!