ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಪ್ರಾದೇಶಿಕ ಕಚೇರಿ ಮತ್ತು ಒರಾಕಲ್ ಇವರು ಇಂದು ಕೆಎಸ್ ಆರ್ಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ, ಸರಕಾರಿ ಪ್ರಥಮ ದರ್ಜೆ ಕಾಲೇಜ್ ವಿಟ್ಲ ಸಮಾಜಕಾರ್ಯ ವಿಭಾಗ ಹಾಗೂ ಎ ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಈ ಎಲ್ಲಾ ಸಂಘ ಸಂಸ್ಥೆಗಳ ಜೊತೆಗೂಡಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಡಾ ಮದ್ನ ಶಿಲ್ಪ ಅವರು ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ವಿದ್ಯಾರ್ಥಿಗಳು ಬೀದಿ ನಾಟಕದ ಮೂಲಕ ತಂಬಾಕುವಿನ ದುಷ್ಪರಿಣಾಮಗಳ ಬಗ್ಗೆ ಅರಿವನ್ನು ಮೂಡಿಸಿದ್ದಾರೆ. ತಂಬಾಕು ಮತ್ತದರ ವಿವಿಧ ಉತ್ಪನ್ನಗಳು ಮನುಕುಲದ ಆರೋಗ್ಯಕ್ಕೆ ಮಾರಕವಾಗಿದೆ. ಕೆಎಸ್ಆರ್ರ್ಟಿಸಿ ಸಿಬ್ಬಂದಿ ವರ್ಗದವರಿಗೆ ಹಾಗೂ ಡ್ರೈವರ್ ಕಂಡಕ್ಟರ್ಗಳಿಗೆ ಹಾಗೂ ತಾಂತ್ರಿಕ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಬಾಯೊಳಗಿನ ಕ್ಯಾನ್ಸರ್ ಬಗ್ಗೆ ತಪಾಸಣೆ ಹಮ್ಮಿಕೊಳ್ಳಲಾಯಿತು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…