ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಸಿದ್ದಾಪುರ,ಹೊಸಂಗಡಿ,ಕಮಲಶಿಲೆ ಪರಿಸರದಲ್ಲಿ ಅಡ್ಡಾಡುತ್ತಿರುವ ಕಾಡಾನೆ

ಕುಂದಾಪುರ ತಾಲೂಕಿನ ಸಿದ್ದಾಪುರ, ಹೊಸಂಗಡಿ ಮತ್ತು ಕಮಲಶಿಲೆ ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಯೊಂದು ದಿನಪೂರ್ತಿ ಕಾಡಿನಲ್ಲಿ ಅವಿತುಕೊಂಡು ಸಂಜೆಯಾಗುತ್ತಿದ್ದ0ತೆ ಮುಖ್ಯರಸ್ತೆಗೆ ಬಂದು ಅಡ್ಡಾಡುತ್ತಿತ್ತು. ಇದರ ಪರಿಣಾಮವಾಗಿ ಕಳೆದ ಎರಡು ದಿನಗಳಿಂದ ಜನರಲ್ಲಿ ಆತಂಕ ಮನೆಮಾಡಿದ್ದು ,ತಾಲೂಕು ಆಡಳಿತ ಸುರಕ್ಷಾ ದೃಷ್ಟಿಯಿಂದ ಶಾಲೆಗಳಿಗೆ ರಜೆಯನ್ನು ಕೂಡ ಘೋಷಣೆ ಮಾಡಿತ್ತು.

ಬಾಳೆಬರೆ ಘಾಟಿಯಿಂದ ಇಳಿದು ಕಳೆದೆರಡು ದಿನಗಳಿಂದ ಕಾಡಿನಲ್ಲಿ ತಂಗಿರುವ ಈ ಒಂಟಿಸಲಗವನ್ನು ಸೆರೆ ಹಿಡಿಯಲು ಇದೀಗ ವನ್ಯಜೀವಿ ಇಲಾಖೆ ಕಾರ್ಯಾಚರಣೆ ಪ್ರಾರಂಭಿಸಿದೆ . ಸಿದ್ದಾಪುರ ಪರಿಸರದಲ್ಲಿ ಇತರೆ ಆನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಸಲು ನಿರ್ಧರಿಸಿರುವ ಇಲಾಖೆ ಈಗಾಗಲೇ ಸಕ್ರೆಬೈಲಿನಿಂದ ಬಾಲಚಂದ್ರ,ಸೋಮಣ್ಣ ,ಮತ್ತು ಬಹದ್ದೂರು ಹೆಸರಿನ ಮೂರು ಆನೆಗಳನ್ನು ತರಿಸಿಕೊಂಡಿದೆ. ಸಂಜೆಯಾಗುತ್ತಿದ್ದ0ತೆ ಕಾಡು ಬಿಟ್ಟು ರೋಡಿಗೆ ಬರುವ ಆನೆಯನ್ನು ಸೆರೆ ಹಿಡಿಯಲು ಇಳಿಸಂಜೆ ಕಾರ್ಯಾಚರಣೆ ಪ್ರಾರಂಭಿಸುವ ಸಾಧ್ಯತೆಯಿದೆ. ರೇಡಿಯೋ ಕಾಲರ್ ನೀಡುವ ಮಾಹಿತಿಯನುಸಾರ ವನ್ಯಜೀವಿ ಇಲಾಖೆ ಕಾರ್ಯಾಚರಣೆ ಆರಂಭಿಸಲಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!