ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಸಿದ್ದಾಪುರ,ಹೊಸಂಗಡಿ,ಕಮಲಶಿಲೆ ಪರಿಸರದಲ್ಲಿ ಅಡ್ಡಾಡುತ್ತಿರುವ ಕಾಡಾನೆ

ಕುಂದಾಪುರ ತಾಲೂಕಿನ ಸಿದ್ದಾಪುರ, ಹೊಸಂಗಡಿ ಮತ್ತು ಕಮಲಶಿಲೆ ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಯೊಂದು ದಿನಪೂರ್ತಿ ಕಾಡಿನಲ್ಲಿ ಅವಿತುಕೊಂಡು ಸಂಜೆಯಾಗುತ್ತಿದ್ದ0ತೆ ಮುಖ್ಯರಸ್ತೆಗೆ ಬಂದು ಅಡ್ಡಾಡುತ್ತಿತ್ತು. ಇದರ ಪರಿಣಾಮವಾಗಿ ಕಳೆದ ಎರಡು ದಿನಗಳಿಂದ ಜನರಲ್ಲಿ ಆತಂಕ ಮನೆಮಾಡಿದ್ದು ,ತಾಲೂಕು ಆಡಳಿತ ಸುರಕ್ಷಾ ದೃಷ್ಟಿಯಿಂದ ಶಾಲೆಗಳಿಗೆ ರಜೆಯನ್ನು ಕೂಡ ಘೋಷಣೆ ಮಾಡಿತ್ತು.

ಬಾಳೆಬರೆ ಘಾಟಿಯಿಂದ ಇಳಿದು ಕಳೆದೆರಡು ದಿನಗಳಿಂದ ಕಾಡಿನಲ್ಲಿ ತಂಗಿರುವ ಈ ಒಂಟಿಸಲಗವನ್ನು ಸೆರೆ ಹಿಡಿಯಲು ಇದೀಗ ವನ್ಯಜೀವಿ ಇಲಾಖೆ ಕಾರ್ಯಾಚರಣೆ ಪ್ರಾರಂಭಿಸಿದೆ . ಸಿದ್ದಾಪುರ ಪರಿಸರದಲ್ಲಿ ಇತರೆ ಆನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಸಲು ನಿರ್ಧರಿಸಿರುವ ಇಲಾಖೆ ಈಗಾಗಲೇ ಸಕ್ರೆಬೈಲಿನಿಂದ ಬಾಲಚಂದ್ರ,ಸೋಮಣ್ಣ ,ಮತ್ತು ಬಹದ್ದೂರು ಹೆಸರಿನ ಮೂರು ಆನೆಗಳನ್ನು ತರಿಸಿಕೊಂಡಿದೆ. ಸಂಜೆಯಾಗುತ್ತಿದ್ದ0ತೆ ಕಾಡು ಬಿಟ್ಟು ರೋಡಿಗೆ ಬರುವ ಆನೆಯನ್ನು ಸೆರೆ ಹಿಡಿಯಲು ಇಳಿಸಂಜೆ ಕಾರ್ಯಾಚರಣೆ ಪ್ರಾರಂಭಿಸುವ ಸಾಧ್ಯತೆಯಿದೆ. ರೇಡಿಯೋ ಕಾಲರ್ ನೀಡುವ ಮಾಹಿತಿಯನುಸಾರ ವನ್ಯಜೀವಿ ಇಲಾಖೆ ಕಾರ್ಯಾಚರಣೆ ಆರಂಭಿಸಲಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!