ಕುಂದಾಪುರ ತಾಲೂಕಿನ ಸಿದ್ದಾಪುರ, ಹೊಸಂಗಡಿ ಮತ್ತು ಕಮಲಶಿಲೆ ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಯೊಂದು ದಿನಪೂರ್ತಿ ಕಾಡಿನಲ್ಲಿ ಅವಿತುಕೊಂಡು ಸಂಜೆಯಾಗುತ್ತಿದ್ದ0ತೆ ಮುಖ್ಯರಸ್ತೆಗೆ ಬಂದು ಅಡ್ಡಾಡುತ್ತಿತ್ತು. ಇದರ ಪರಿಣಾಮವಾಗಿ ಕಳೆದ ಎರಡು ದಿನಗಳಿಂದ ಜನರಲ್ಲಿ ಆತಂಕ ಮನೆಮಾಡಿದ್ದು ,ತಾಲೂಕು ಆಡಳಿತ ಸುರಕ್ಷಾ ದೃಷ್ಟಿಯಿಂದ ಶಾಲೆಗಳಿಗೆ ರಜೆಯನ್ನು ಕೂಡ ಘೋಷಣೆ ಮಾಡಿತ್ತು.
ಬಾಳೆಬರೆ ಘಾಟಿಯಿಂದ ಇಳಿದು ಕಳೆದೆರಡು ದಿನಗಳಿಂದ ಕಾಡಿನಲ್ಲಿ ತಂಗಿರುವ ಈ ಒಂಟಿಸಲಗವನ್ನು ಸೆರೆ ಹಿಡಿಯಲು ಇದೀಗ ವನ್ಯಜೀವಿ ಇಲಾಖೆ ಕಾರ್ಯಾಚರಣೆ ಪ್ರಾರಂಭಿಸಿದೆ . ಸಿದ್ದಾಪುರ ಪರಿಸರದಲ್ಲಿ ಇತರೆ ಆನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಸಲು ನಿರ್ಧರಿಸಿರುವ ಇಲಾಖೆ ಈಗಾಗಲೇ ಸಕ್ರೆಬೈಲಿನಿಂದ ಬಾಲಚಂದ್ರ,ಸೋಮಣ್ಣ ,ಮತ್ತು ಬಹದ್ದೂರು ಹೆಸರಿನ ಮೂರು ಆನೆಗಳನ್ನು ತರಿಸಿಕೊಂಡಿದೆ. ಸಂಜೆಯಾಗುತ್ತಿದ್ದ0ತೆ ಕಾಡು ಬಿಟ್ಟು ರೋಡಿಗೆ ಬರುವ ಆನೆಯನ್ನು ಸೆರೆ ಹಿಡಿಯಲು ಇಳಿಸಂಜೆ ಕಾರ್ಯಾಚರಣೆ ಪ್ರಾರಂಭಿಸುವ ಸಾಧ್ಯತೆಯಿದೆ. ರೇಡಿಯೋ ಕಾಲರ್ ನೀಡುವ ಮಾಹಿತಿಯನುಸಾರ ವನ್ಯಜೀವಿ ಇಲಾಖೆ ಕಾರ್ಯಾಚರಣೆ ಆರಂಭಿಸಲಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…