ಕುಂದಾಪುರ ತಾಲೂಕಿನ ಸಿದ್ದಾಪುರ, ಹೊಸಂಗಡಿ ಮತ್ತು ಕಮಲಶಿಲೆ ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಯೊಂದು ದಿನಪೂರ್ತಿ ಕಾಡಿನಲ್ಲಿ ಅವಿತುಕೊಂಡು ಸಂಜೆಯಾಗುತ್ತಿದ್ದ0ತೆ ಮುಖ್ಯರಸ್ತೆಗೆ ಬಂದು ಅಡ್ಡಾಡುತ್ತಿತ್ತು. ಇದರ ಪರಿಣಾಮವಾಗಿ ಕಳೆದ ಎರಡು ದಿನಗಳಿಂದ ಜನರಲ್ಲಿ ಆತಂಕ ಮನೆಮಾಡಿದ್ದು ,ತಾಲೂಕು ಆಡಳಿತ ಸುರಕ್ಷಾ ದೃಷ್ಟಿಯಿಂದ ಶಾಲೆಗಳಿಗೆ ರಜೆಯನ್ನು ಕೂಡ ಘೋಷಣೆ ಮಾಡಿತ್ತು.
ಬಾಳೆಬರೆ ಘಾಟಿಯಿಂದ ಇಳಿದು ಕಳೆದೆರಡು ದಿನಗಳಿಂದ ಕಾಡಿನಲ್ಲಿ ತಂಗಿರುವ ಈ ಒಂಟಿಸಲಗವನ್ನು ಸೆರೆ ಹಿಡಿಯಲು ಇದೀಗ ವನ್ಯಜೀವಿ ಇಲಾಖೆ ಕಾರ್ಯಾಚರಣೆ ಪ್ರಾರಂಭಿಸಿದೆ . ಸಿದ್ದಾಪುರ ಪರಿಸರದಲ್ಲಿ ಇತರೆ ಆನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಸಲು ನಿರ್ಧರಿಸಿರುವ ಇಲಾಖೆ ಈಗಾಗಲೇ ಸಕ್ರೆಬೈಲಿನಿಂದ ಬಾಲಚಂದ್ರ,ಸೋಮಣ್ಣ ,ಮತ್ತು ಬಹದ್ದೂರು ಹೆಸರಿನ ಮೂರು ಆನೆಗಳನ್ನು ತರಿಸಿಕೊಂಡಿದೆ. ಸಂಜೆಯಾಗುತ್ತಿದ್ದ0ತೆ ಕಾಡು ಬಿಟ್ಟು ರೋಡಿಗೆ ಬರುವ ಆನೆಯನ್ನು ಸೆರೆ ಹಿಡಿಯಲು ಇಳಿಸಂಜೆ ಕಾರ್ಯಾಚರಣೆ ಪ್ರಾರಂಭಿಸುವ ಸಾಧ್ಯತೆಯಿದೆ. ರೇಡಿಯೋ ಕಾಲರ್ ನೀಡುವ ಮಾಹಿತಿಯನುಸಾರ ವನ್ಯಜೀವಿ ಇಲಾಖೆ ಕಾರ್ಯಾಚರಣೆ ಆರಂಭಿಸಲಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…