ಕುಂದಾಪುರ ತಾಲೂಕಿನ ಸಿದ್ದಾಪುರ, ಹೊಸಂಗಡಿ ಮತ್ತು ಕಮಲಶಿಲೆ ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಯೊಂದು ದಿನಪೂರ್ತಿ ಕಾಡಿನಲ್ಲಿ ಅವಿತುಕೊಂಡು ಸಂಜೆಯಾಗುತ್ತಿದ್ದ0ತೆ ಮುಖ್ಯರಸ್ತೆಗೆ ಬಂದು ಅಡ್ಡಾಡುತ್ತಿತ್ತು. ಇದರ ಪರಿಣಾಮವಾಗಿ ಕಳೆದ ಎರಡು ದಿನಗಳಿಂದ ಜನರಲ್ಲಿ ಆತಂಕ ಮನೆಮಾಡಿದ್ದು ,ತಾಲೂಕು ಆಡಳಿತ ಸುರಕ್ಷಾ ದೃಷ್ಟಿಯಿಂದ ಶಾಲೆಗಳಿಗೆ ರಜೆಯನ್ನು ಕೂಡ ಘೋಷಣೆ ಮಾಡಿತ್ತು.
ಬಾಳೆಬರೆ ಘಾಟಿಯಿಂದ ಇಳಿದು ಕಳೆದೆರಡು ದಿನಗಳಿಂದ ಕಾಡಿನಲ್ಲಿ ತಂಗಿರುವ ಈ ಒಂಟಿಸಲಗವನ್ನು ಸೆರೆ ಹಿಡಿಯಲು ಇದೀಗ ವನ್ಯಜೀವಿ ಇಲಾಖೆ ಕಾರ್ಯಾಚರಣೆ ಪ್ರಾರಂಭಿಸಿದೆ . ಸಿದ್ದಾಪುರ ಪರಿಸರದಲ್ಲಿ ಇತರೆ ಆನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಸಲು ನಿರ್ಧರಿಸಿರುವ ಇಲಾಖೆ ಈಗಾಗಲೇ ಸಕ್ರೆಬೈಲಿನಿಂದ ಬಾಲಚಂದ್ರ,ಸೋಮಣ್ಣ ,ಮತ್ತು ಬಹದ್ದೂರು ಹೆಸರಿನ ಮೂರು ಆನೆಗಳನ್ನು ತರಿಸಿಕೊಂಡಿದೆ. ಸಂಜೆಯಾಗುತ್ತಿದ್ದ0ತೆ ಕಾಡು ಬಿಟ್ಟು ರೋಡಿಗೆ ಬರುವ ಆನೆಯನ್ನು ಸೆರೆ ಹಿಡಿಯಲು ಇಳಿಸಂಜೆ ಕಾರ್ಯಾಚರಣೆ ಪ್ರಾರಂಭಿಸುವ ಸಾಧ್ಯತೆಯಿದೆ. ರೇಡಿಯೋ ಕಾಲರ್ ನೀಡುವ ಮಾಹಿತಿಯನುಸಾರ ವನ್ಯಜೀವಿ ಇಲಾಖೆ ಕಾರ್ಯಾಚರಣೆ ಆರಂಭಿಸಲಿದೆ.
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…