ಇತರೆ

ಉಡುಪಿ: ಸಿದ್ದಾಪುರ,ಹೊಸಂಗಡಿ,ಕಮಲಶಿಲೆ ಪರಿಸರದಲ್ಲಿ ಅಡ್ಡಾಡುತ್ತಿರುವ ಕಾಡಾನೆ

ಕುಂದಾಪುರ ತಾಲೂಕಿನ ಸಿದ್ದಾಪುರ, ಹೊಸಂಗಡಿ ಮತ್ತು ಕಮಲಶಿಲೆ ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಯೊಂದು ದಿನಪೂರ್ತಿ ಕಾಡಿನಲ್ಲಿ ಅವಿತುಕೊಂಡು ಸಂಜೆಯಾಗುತ್ತಿದ್ದ0ತೆ ಮುಖ್ಯರಸ್ತೆಗೆ ಬಂದು ಅಡ್ಡಾಡುತ್ತಿತ್ತು. ಇದರ ಪರಿಣಾಮವಾಗಿ ಕಳೆದ ಎರಡು ದಿನಗಳಿಂದ ಜನರಲ್ಲಿ ಆತಂಕ ಮನೆಮಾಡಿದ್ದು ,ತಾಲೂಕು ಆಡಳಿತ ಸುರಕ್ಷಾ ದೃಷ್ಟಿಯಿಂದ ಶಾಲೆಗಳಿಗೆ ರಜೆಯನ್ನು ಕೂಡ ಘೋಷಣೆ ಮಾಡಿತ್ತು.

ಬಾಳೆಬರೆ ಘಾಟಿಯಿಂದ ಇಳಿದು ಕಳೆದೆರಡು ದಿನಗಳಿಂದ ಕಾಡಿನಲ್ಲಿ ತಂಗಿರುವ ಈ ಒಂಟಿಸಲಗವನ್ನು ಸೆರೆ ಹಿಡಿಯಲು ಇದೀಗ ವನ್ಯಜೀವಿ ಇಲಾಖೆ ಕಾರ್ಯಾಚರಣೆ ಪ್ರಾರಂಭಿಸಿದೆ . ಸಿದ್ದಾಪುರ ಪರಿಸರದಲ್ಲಿ ಇತರೆ ಆನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಸಲು ನಿರ್ಧರಿಸಿರುವ ಇಲಾಖೆ ಈಗಾಗಲೇ ಸಕ್ರೆಬೈಲಿನಿಂದ ಬಾಲಚಂದ್ರ,ಸೋಮಣ್ಣ ,ಮತ್ತು ಬಹದ್ದೂರು ಹೆಸರಿನ ಮೂರು ಆನೆಗಳನ್ನು ತರಿಸಿಕೊಂಡಿದೆ. ಸಂಜೆಯಾಗುತ್ತಿದ್ದ0ತೆ ಕಾಡು ಬಿಟ್ಟು ರೋಡಿಗೆ ಬರುವ ಆನೆಯನ್ನು ಸೆರೆ ಹಿಡಿಯಲು ಇಳಿಸಂಜೆ ಕಾರ್ಯಾಚರಣೆ ಪ್ರಾರಂಭಿಸುವ ಸಾಧ್ಯತೆಯಿದೆ. ರೇಡಿಯೋ ಕಾಲರ್ ನೀಡುವ ಮಾಹಿತಿಯನುಸಾರ ವನ್ಯಜೀವಿ ಇಲಾಖೆ ಕಾರ್ಯಾಚರಣೆ ಆರಂಭಿಸಲಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…

2 hours ago

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…

2 hours ago

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…

19 hours ago

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…

19 hours ago

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…

19 hours ago

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…

1 day ago