ಜನ ಮನದ ನಾಡಿ ಮಿಡಿತ

Advertisement

ಪಾಣೆಮಂಗಳೂರು: ಪಾಣೆಮಂಗಳೂರು ಹಳೆ ಸೇತುವೆ ಬಳಿ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆ..!

ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ. ಅವರು ಸುಳ್ಯ ಮಂಗಳ ಡ್ರೈವಿಂಗ್ ಸ್ಕೂಲ್ ನ ಮಾಲಕರಾಗಿದ್ದಾರೆ. ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್ ಅಂಗಿ ಮೊಬೈಲ್ ಮತ್ತು ಚಪ್ಪಲ್ಲಿ ಅನಾಥವಾಗಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈ ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳೀಯರ ಹಾಗೂ ಈಜುಪಟುಗಳ ನೆರವಿನಿಂದ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ರಮೇಶ್ ರೈ ಅವರು ಇತ್ತೀಚೆಗೆ ನಡೆದ ಪುತ್ತೂರು ನಗರಸಭೆಯ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ನೆಲ್ಲಿಕಟ್ಟೆ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಅವರು ಸಜ್ಜನ ರಾಜಕಾರಣಿ ಎಂದೇ ಚಿರಪರಿಚಿತರಾಗಿದ್ದರು. ಅವರ ಮಿತ್ರರು ಈ ಘಟನೆಯಿಂದ ಆಘಾತಕ್ಕೆ ಒಳಗಾಗಿದ್ದಾರೆ. ಆರೋಗ್ಯ ಸಮಸ್ಯೆ ಅಥವಾ ಹಣಕಾಸಿನ ಸಮಸ್ಯೆಯಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆAದು ಹೇಳಲಾಗುತ್ತಿದೆ. ಪಾಣೆಮಂಗಳೂರು ಸೇತುವೆ ಬಳಿ ದೊರೆತ ಮೊಬೈಲ್ ಸಂಖ್ಯೆಯನ್ನು ಪಡೆದು ಪೊಲೀಸರು ಕರೆ ಮಾಡಿದಾಗ, ಅದು ಪುತ್ತೂರಿನ ರಮೇಶ್ ರೈ ಅವರಿಗೆ ಸೇರಿದ್ದೆಂದು ತಿಳಿದುಬಂದಿತ್ತು. ಕೂಡಲೇ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಯಿತು. ಇದೀಗ ಕುಟುಂಬ ಸದಸ್ಯರು ಮೃತದೇಹವನ್ನು ಗುರುತಿಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಮೃತರು ಪತ್ನಿ ಮೋಹಿನಿ, ಪುತ್ರ ವಿನೀಶ್, ಪುತ್ರಿ ವೀಕ್ಷಾ ಹಾಗೂ ಅಪಾರ ಕುಟುಂಬ ವರ್ಗ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!