ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ಪ್ರಗತಿಯನ್ನು ಬಲಪಡಿಸುವ ಉದ್ದೇಶದಿಂದ ಕೆಪಿಸಿಸಿ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಈಗಾಗಲೆ ಧಾರ್ಮಿಕ ಮುಖಂಡರು, ವ್ಯಾಪಾರಿಗಳು, ನ್ಯಾಯವಾದಿಗಳು, ಬರಹಗಾರರು, ಸಾಮಾನ್ಯರು ಮುಂತಾದವರ ನಿಲುವನ್ನು ಪಡೆದುಕೊಳ್ಳಲು ಪ್ರಾರಂಭಿಸಿದೆ ಎಂದು ರಾಜ್ಯಸಭಾ ಸದಸ್ಯರು, ಎಐಸಿಸಿ ಪ್ರಧಾನ ಕಾರ್ಯದರ್ಶಿಯಾದ ಡಾ.ನಾಸೀರ್ ಹುಸೈನ್ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ರು.
ದಕ್ಷಿಣ ಕನ್ನಡ ಭಾಗದಲ್ಲಿ ಶಾಂತಿ ಸೌಹಾರ್ದತೆಯ ಶಾಶ್ವತ ಉಳಿವಿಗಾಗಿ ಕೆಲಸ ಮಾಡುವುದು ನಮ್ಮ ಉದ್ದೇಶವಾಗಿದೆ. ಒಂದು ಕಾಲದಲ್ಲಿ ಧಾರ್ಮಿಕ, ಸಮಾಜಿಕ, ಸಾಂಸ್ಕೃತಿಕ ಅಭಿವೃದ್ಧಿಗೆ ಕೊಡುಗೆ ನೀಡಿದ್ದ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ಇದೆ. ಜನರ ಅಭಿಪ್ರಾಯವನ್ನು ಕ್ರೋಡೀಕರಿಸಿ ರಾಜಕೀಯ ಮುಖಂಡರ ಜೊತೆ ಚರ್ಚೆ ನಡೆಸಿ ವರದಿಯನ್ನು ಮುಂದಿನ ವಾರದಲ್ಲಿ ಜಾರಿ ಮಾಡಲಾಗುವುದು ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಯನ ಸಮಿತಿ ಕಿಮ್ಮಣಿ ರತ್ನಾಕರ್, ಜಯಪ್ರಕಾಶ್ ಹೆಗ್ಡೆ, ಸುದರ್ಶನ್, ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ, ಪದ್ಮರಾಜ್ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…