ಪ್ರಚೋದನಕಾರಿ ಭಾಷಣ ಕೇಸ್ನಲ್ಲಿ ಭಜರಂಗದಳ ಮುಖಂಡ ಭರತ್ ಕುಮ್ಡೇಲುಗೆ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಭಜರಂಗದಳ ಪುತ್ತೂರು ಸಂಚಾಲಕ ಭರತ್ ಕುಮ್ಡೇಲು ವಿರುದ್ದ ಬಂಧನ ಸಹಿತ ಯಾವುದೇ ಒತ್ತಡದ ಕ್ರಮ ಕೈಗೊಳ್ಳದಂತೆ ಆದೇಶ ಆಗಿದೆ. ಭರತ್ ಕುಮ್ಡೇಲು ಪೊಲೀಸರ ವಿಚಾರಣೆಗೆ ಸಹಕರಿಸುವಂತೆ ಸೂಚನೆ ನೀಡಲಾಗಿದೆ.
ಹೈಕೋಟ್ ನ ನ್ಯಾಯಾಮೂರ್ತಿ ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠ ಆದೇಶ ನೀಡಿದೆ. ಮೇ.15 ರಂದು ಪುತ್ತೂರು ಜೈನ ಭವನದಲ್ಲಿ ವಿಎಚ್ಪಿ ಆಯೋಜಿಸಿದ್ದ ಕಾರ್ಯಕ್ರಮವಾದ ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಸಭೆಯಲ್ಲಿ ಭಾಷಣ ಮಾಡಿದ್ದ ಭಜರಂಗಳದ ಮುಖಂಡ ಭರತ್ ಕುಮ್ಡೇಲು ಅವರ ಮೇಲೆ ಪುತ್ತೂರು ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದೀಗ ಭರತ್ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಮಂಡಿಸಿದ್ದು, ಬಿಗ್ ರಿಲೀಫ್ ಸಿಕ್ಕಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…