ಜನ ಮನದ ನಾಡಿ ಮಿಡಿತ

Advertisement

ಸಂಪರ್ಕ್ ಸೇ ಸಮರ್ಥನ್ : ಶಾಸಕ ವೇದವ್ಯಾಸ್ ಕಾಮತ್, ವಿಜಯ್ ಕುಮಾರ್ ಶೆಟ್ಟಿ ನಾಯಕ್ ಪೈ ಅಸೋಸಿಯೇಟ್ ಮಾಲಕರಾದ ಸುರೇಶ್ ಪೈ ಮನೆಗೆ ಬೇಟಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಯಶಸ್ವಿಯಾಗಿ 9 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಸಂಪರ್ಕ್ ಸೇ ಸಮರ್ಥನ್ ಅಭಿಯಾನದ ಅಂಗವಾಗಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪ್ರಮುಖರು ನಾಯಕ್ ಪೈ ಅಸೋಸಿಯೇಟ್ ಮಾಲಕರಾದ ಸುರೇಶ್ ಪೈ ಅವರ ಮನೆಗೆ ಭೇಟಿ ನೀಡಿ ಕೇಂದ್ರ ಸರಕಾರದ ಸಾಧನೆಗಳ ಕಿರು ಹೊತ್ತಿಗೆಯನ್ನು ನೀಡಿದರು‌.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕಳೆದ 9 ವರ್ಷಗಳಲ್ಲಿ ದೇಶವು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಪ್ರಬಲ‌ ನಾಯಕತ್ವದ ಕಾರಣ ಭಾರತ ಇಂದು ಜಗತ್ತಿಗೆ ಮಾರ್ಗದರ್ಶನ ಮಾಡುವಂತಾಗಿದೆ. ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಕೂಡ ಭಾರತ ಸಂಧಾನದ ನೇತೃತ್ವ ವಹಿಸಬೇಕೆಂದು ವಿಶ್ವದ ಅನೇಕ ದೇಶಗಳು ಆಗ್ರಹಿಸಿದ್ದವು. ಇವೆಲ್ಲದಕ್ಕೂ ಕಾರಣ ದೇಶದ ಜನತೆಯ ಬೆಂಬಲ. ಮತ್ತೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನತೆ ನರೇಂದ್ರ ಮೋದಿ ಜೀ ಅವರನ್ನು ಬೆಂಬಲಿಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಸಂಧ್ಯಾ ಮೋಹನ್ ಆಚಾರ್ಯ, ಬಿಜೆಪಿ ಮುಖಂಡರಾದ ನಿತಿನ್ ಕುಮಾರ್, ರೂಪಾ ಡಿ ಬಂಗೇರ, ರಮೇಶ್ ಹೆಗ್ಡೆ, ಗುರುಚರಣ್, ಗೋಕುಲ್ ದಾಸ್ ಭಟ್, ಮೋಹನ್ ಆಚಾರ್ಯ, ರಾಮ್ ಪೈ, ನಿಲೇಶ್ ಕಾಮತ್, ಪವನ್ ಶೆಣೈ, ಪೃಥ್ವಿರಾಜ್ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!