ಜನ ಮನದ ನಾಡಿ ಮಿಡಿತ

Advertisement

ಸಂಪರ್ಕ್ ಸೇ ಸಮರ್ಥನ್ : ಶಾಸಕ ವೇದವ್ಯಾಸ್ ಕಾಮತ್, ವಿಜಯ್ ಕುಮಾರ್ ಶೆಟ್ಟಿ ನಾಯಕ್ ಪೈ ಅಸೋಸಿಯೇಟ್ ಮಾಲಕರಾದ ಸುರೇಶ್ ಪೈ ಮನೆಗೆ ಬೇಟಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಯಶಸ್ವಿಯಾಗಿ 9 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಸಂಪರ್ಕ್ ಸೇ ಸಮರ್ಥನ್ ಅಭಿಯಾನದ ಅಂಗವಾಗಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪ್ರಮುಖರು ನಾಯಕ್ ಪೈ ಅಸೋಸಿಯೇಟ್ ಮಾಲಕರಾದ ಸುರೇಶ್ ಪೈ ಅವರ ಮನೆಗೆ ಭೇಟಿ ನೀಡಿ ಕೇಂದ್ರ ಸರಕಾರದ ಸಾಧನೆಗಳ ಕಿರು ಹೊತ್ತಿಗೆಯನ್ನು ನೀಡಿದರು‌.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕಳೆದ 9 ವರ್ಷಗಳಲ್ಲಿ ದೇಶವು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಪ್ರಬಲ‌ ನಾಯಕತ್ವದ ಕಾರಣ ಭಾರತ ಇಂದು ಜಗತ್ತಿಗೆ ಮಾರ್ಗದರ್ಶನ ಮಾಡುವಂತಾಗಿದೆ. ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಕೂಡ ಭಾರತ ಸಂಧಾನದ ನೇತೃತ್ವ ವಹಿಸಬೇಕೆಂದು ವಿಶ್ವದ ಅನೇಕ ದೇಶಗಳು ಆಗ್ರಹಿಸಿದ್ದವು. ಇವೆಲ್ಲದಕ್ಕೂ ಕಾರಣ ದೇಶದ ಜನತೆಯ ಬೆಂಬಲ. ಮತ್ತೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನತೆ ನರೇಂದ್ರ ಮೋದಿ ಜೀ ಅವರನ್ನು ಬೆಂಬಲಿಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಸಂಧ್ಯಾ ಮೋಹನ್ ಆಚಾರ್ಯ, ಬಿಜೆಪಿ ಮುಖಂಡರಾದ ನಿತಿನ್ ಕುಮಾರ್, ರೂಪಾ ಡಿ ಬಂಗೇರ, ರಮೇಶ್ ಹೆಗ್ಡೆ, ಗುರುಚರಣ್, ಗೋಕುಲ್ ದಾಸ್ ಭಟ್, ಮೋಹನ್ ಆಚಾರ್ಯ, ರಾಮ್ ಪೈ, ನಿಲೇಶ್ ಕಾಮತ್, ಪವನ್ ಶೆಣೈ, ಪೃಥ್ವಿರಾಜ್ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!