ಜನ ಮನದ ನಾಡಿ ಮಿಡಿತ

Advertisement

ಸಂಪರ್ಕ್ ಸೇ ಸಮರ್ಥನ್ : ಶಾಸಕ ವೇದವ್ಯಾಸ್ ಕಾಮತ್, ವಿಜಯ್ ಕುಮಾರ್ ಶೆಟ್ಟಿ ನಾಯಕ್ ಪೈ ಅಸೋಸಿಯೇಟ್ ಮಾಲಕರಾದ ಸುರೇಶ್ ಪೈ ಮನೆಗೆ ಬೇಟಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಯಶಸ್ವಿಯಾಗಿ 9 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಸಂಪರ್ಕ್ ಸೇ ಸಮರ್ಥನ್ ಅಭಿಯಾನದ ಅಂಗವಾಗಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪ್ರಮುಖರು ನಾಯಕ್ ಪೈ ಅಸೋಸಿಯೇಟ್ ಮಾಲಕರಾದ ಸುರೇಶ್ ಪೈ ಅವರ ಮನೆಗೆ ಭೇಟಿ ನೀಡಿ ಕೇಂದ್ರ ಸರಕಾರದ ಸಾಧನೆಗಳ ಕಿರು ಹೊತ್ತಿಗೆಯನ್ನು ನೀಡಿದರು‌.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕಳೆದ 9 ವರ್ಷಗಳಲ್ಲಿ ದೇಶವು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಪ್ರಬಲ‌ ನಾಯಕತ್ವದ ಕಾರಣ ಭಾರತ ಇಂದು ಜಗತ್ತಿಗೆ ಮಾರ್ಗದರ್ಶನ ಮಾಡುವಂತಾಗಿದೆ. ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಕೂಡ ಭಾರತ ಸಂಧಾನದ ನೇತೃತ್ವ ವಹಿಸಬೇಕೆಂದು ವಿಶ್ವದ ಅನೇಕ ದೇಶಗಳು ಆಗ್ರಹಿಸಿದ್ದವು. ಇವೆಲ್ಲದಕ್ಕೂ ಕಾರಣ ದೇಶದ ಜನತೆಯ ಬೆಂಬಲ. ಮತ್ತೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನತೆ ನರೇಂದ್ರ ಮೋದಿ ಜೀ ಅವರನ್ನು ಬೆಂಬಲಿಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಸಂಧ್ಯಾ ಮೋಹನ್ ಆಚಾರ್ಯ, ಬಿಜೆಪಿ ಮುಖಂಡರಾದ ನಿತಿನ್ ಕುಮಾರ್, ರೂಪಾ ಡಿ ಬಂಗೇರ, ರಮೇಶ್ ಹೆಗ್ಡೆ, ಗುರುಚರಣ್, ಗೋಕುಲ್ ದಾಸ್ ಭಟ್, ಮೋಹನ್ ಆಚಾರ್ಯ, ರಾಮ್ ಪೈ, ನಿಲೇಶ್ ಕಾಮತ್, ಪವನ್ ಶೆಣೈ, ಪೃಥ್ವಿರಾಜ್ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!