ಸುಮಾರು 62 ವರ್ಷಗಳ ಹಿಂದೆ ಮುಂಬಾಯಿ ನಗರಕ್ಕೆ ಕೆಲಸವನ್ನು ಹುಡುಕಿಕೊಂಡು ಹೋಗಿದ್ದ ವ್ಯಕ್ತಿಯೊಬ್ಬರು ಇದೀಗ ಊರಿನತ್ತ ಹಿಂತಿರುಗಿದ ಆಶ್ಚರ್ಯಕರ ಘಟನೆಯೊಂದು ಬಂಟ್ವಾಳ ತಾಲೂಕಿನ ನರಿಕೊಂಬುವಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ರಾಯಶ ನಿವಾಸಿ ದಿ. ಗುಡ್ಡಪ್ಪ ಪೂಜಾರಿ ಹಾಗೂ ನಾಗಮ್ಮ ಅವರ ಮೂರನೇ ಪುತ್ರ ಸಂಜೀವ ಪೂಜಾರಿ ಅವರು ತನ್ನ 13 ನೇ ಇಸವಿಯಲ್ಲಿ ಮನೆ ಬಿಟ್ಟು ಕೆಲಸಕ್ಕಾಗಿ ಮುಂಬಯಿ ನಗರಕ್ಕೆ ಕಾಲಿಟ್ಟರು. ಅದಾದ ಬಳಿಕ ಇಂದಿನವರೆಗೆ ಮನೆ ಮಂದಿಯವರ ಮುಖವನ್ನು ಒಮ್ಮೆಯೂ ತಿರುಗಿ ನೋಡಿದವರಲ್ಲ.
ತಂದೆ ತಾಯಿಯ ಸುಖದುಖದಲ್ಲಾಗಲಿ,ಅಣ್ಣ ತಮ್ಮಂದಿರ ಗೌಜಿಗಮ್ಮತ್ತುಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಬಂದಿರಲಿಲ್ಲ.ಒಟ್ಟಿನಲ್ಲಿ ಹೇಳುವುದಾದರೆ ಯಾವುದೇ ಸಂಪರ್ಕ ಮನೆಯವರ ಜೊತೆ ಸಿಗಲಿಲ್ಲವಂತೆ. ಅಷ್ಟಕ್ಕೂ ಅವರನ್ನು ಸ್ಥಳೀಯ ತನಿಯಪ್ಪ ಎಂಬವರು ಉದ್ಯೋಗ ನೀಡುವುದಾಗಿ ಮುಂಬಯಿಗೆ ಕರೆದುಕೊಂಡು ಹೋಗಿದ್ದರು ಎಂದಿದ್ದಾರೆ. ತಂದೆ ತಾಯಿಗೆ ಮಗನ ಬರುವಿಕೆ ಕಾದು ಕಾದು ಕೊನೆಯುಸಿರೆಳೆದರು. ಮಗ ಬದುಕಿ ಬರುವ ಆಸೆಯನ್ನು ತಂದೆತಾಯಿಯ ಜೊತೆ ಮನೆಯವರು ಕಳೆದುಕೊಂಡಿದ್ದರು. ಇದೀಗ ಅವರ ತಮ್ಮ ಗಂಗಾಧರ ಪೂಜಾರಿ ಅವರ ಮನೆಗೆ ಬಂದಿದ್ದಾರೆ.62 ವರ್ಷಗಳ ಬಳಿಕ ಊರಿಗೆ ಬಂದ ಅಣ್ಣನನ್ನು ಕಂಡು ತಮ್ಮನಿಗೆ ಬಹಳ ಸಂತೋಷವಾಗಿದೆ ಮಲೆಯಾಳ, ಮರಾಠಿ, ಬಂಗಾಳಿ, ಹಿ0ದಿ, ತುಳು ಹಾಗೂ ಕನ್ನಡ ಭಾಷೆಯಲ್ಲಿ ನಿರರ್ಗಳವಾಗಿ ಮಾತನಾಡಿದ್ದಾರೆ. ಯಾವುದೇ ದಾಖಲೆ ಪತ್ರಗಳು ಅವರಲ್ಲಿ ಇಲ್ಲ ಎಂದು ಹೇಳುತ್ತಾರೆ ಎಂದು ಮನೆಯವರು ತಿಳಿಸುತ್ತಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…