ಸುಮಾರು 62 ವರ್ಷಗಳ ಹಿಂದೆ ಮುಂಬಾಯಿ ನಗರಕ್ಕೆ ಕೆಲಸವನ್ನು ಹುಡುಕಿಕೊಂಡು ಹೋಗಿದ್ದ ವ್ಯಕ್ತಿಯೊಬ್ಬರು ಇದೀಗ ಊರಿನತ್ತ ಹಿಂತಿರುಗಿದ ಆಶ್ಚರ್ಯಕರ ಘಟನೆಯೊಂದು ಬಂಟ್ವಾಳ ತಾಲೂಕಿನ ನರಿಕೊಂಬುವಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ರಾಯಶ ನಿವಾಸಿ ದಿ. ಗುಡ್ಡಪ್ಪ ಪೂಜಾರಿ ಹಾಗೂ ನಾಗಮ್ಮ ಅವರ ಮೂರನೇ ಪುತ್ರ ಸಂಜೀವ ಪೂಜಾರಿ ಅವರು ತನ್ನ 13 ನೇ ಇಸವಿಯಲ್ಲಿ ಮನೆ ಬಿಟ್ಟು ಕೆಲಸಕ್ಕಾಗಿ ಮುಂಬಯಿ ನಗರಕ್ಕೆ ಕಾಲಿಟ್ಟರು. ಅದಾದ ಬಳಿಕ ಇಂದಿನವರೆಗೆ ಮನೆ ಮಂದಿಯವರ ಮುಖವನ್ನು ಒಮ್ಮೆಯೂ ತಿರುಗಿ ನೋಡಿದವರಲ್ಲ.
ತಂದೆ ತಾಯಿಯ ಸುಖದುಖದಲ್ಲಾಗಲಿ,ಅಣ್ಣ ತಮ್ಮಂದಿರ ಗೌಜಿಗಮ್ಮತ್ತುಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಬಂದಿರಲಿಲ್ಲ.ಒಟ್ಟಿನಲ್ಲಿ ಹೇಳುವುದಾದರೆ ಯಾವುದೇ ಸಂಪರ್ಕ ಮನೆಯವರ ಜೊತೆ ಸಿಗಲಿಲ್ಲವಂತೆ. ಅಷ್ಟಕ್ಕೂ ಅವರನ್ನು ಸ್ಥಳೀಯ ತನಿಯಪ್ಪ ಎಂಬವರು ಉದ್ಯೋಗ ನೀಡುವುದಾಗಿ ಮುಂಬಯಿಗೆ ಕರೆದುಕೊಂಡು ಹೋಗಿದ್ದರು ಎಂದಿದ್ದಾರೆ. ತಂದೆ ತಾಯಿಗೆ ಮಗನ ಬರುವಿಕೆ ಕಾದು ಕಾದು ಕೊನೆಯುಸಿರೆಳೆದರು. ಮಗ ಬದುಕಿ ಬರುವ ಆಸೆಯನ್ನು ತಂದೆತಾಯಿಯ ಜೊತೆ ಮನೆಯವರು ಕಳೆದುಕೊಂಡಿದ್ದರು. ಇದೀಗ ಅವರ ತಮ್ಮ ಗಂಗಾಧರ ಪೂಜಾರಿ ಅವರ ಮನೆಗೆ ಬಂದಿದ್ದಾರೆ.62 ವರ್ಷಗಳ ಬಳಿಕ ಊರಿಗೆ ಬಂದ ಅಣ್ಣನನ್ನು ಕಂಡು ತಮ್ಮನಿಗೆ ಬಹಳ ಸಂತೋಷವಾಗಿದೆ ಮಲೆಯಾಳ, ಮರಾಠಿ, ಬಂಗಾಳಿ, ಹಿ0ದಿ, ತುಳು ಹಾಗೂ ಕನ್ನಡ ಭಾಷೆಯಲ್ಲಿ ನಿರರ್ಗಳವಾಗಿ ಮಾತನಾಡಿದ್ದಾರೆ. ಯಾವುದೇ ದಾಖಲೆ ಪತ್ರಗಳು ಅವರಲ್ಲಿ ಇಲ್ಲ ಎಂದು ಹೇಳುತ್ತಾರೆ ಎಂದು ಮನೆಯವರು ತಿಳಿಸುತ್ತಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…