ಸುಮಾರು 62 ವರ್ಷಗಳ ಹಿಂದೆ ಮುಂಬಾಯಿ ನಗರಕ್ಕೆ ಕೆಲಸವನ್ನು ಹುಡುಕಿಕೊಂಡು ಹೋಗಿದ್ದ ವ್ಯಕ್ತಿಯೊಬ್ಬರು ಇದೀಗ ಊರಿನತ್ತ ಹಿಂತಿರುಗಿದ ಆಶ್ಚರ್ಯಕರ ಘಟನೆಯೊಂದು ಬಂಟ್ವಾಳ ತಾಲೂಕಿನ ನರಿಕೊಂಬುವಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ರಾಯಶ ನಿವಾಸಿ ದಿ. ಗುಡ್ಡಪ್ಪ ಪೂಜಾರಿ ಹಾಗೂ ನಾಗಮ್ಮ ಅವರ ಮೂರನೇ ಪುತ್ರ ಸಂಜೀವ ಪೂಜಾರಿ ಅವರು ತನ್ನ 13 ನೇ ಇಸವಿಯಲ್ಲಿ ಮನೆ ಬಿಟ್ಟು ಕೆಲಸಕ್ಕಾಗಿ ಮುಂಬಯಿ ನಗರಕ್ಕೆ ಕಾಲಿಟ್ಟರು. ಅದಾದ ಬಳಿಕ ಇಂದಿನವರೆಗೆ ಮನೆ ಮಂದಿಯವರ ಮುಖವನ್ನು ಒಮ್ಮೆಯೂ ತಿರುಗಿ ನೋಡಿದವರಲ್ಲ.
ತಂದೆ ತಾಯಿಯ ಸುಖದುಖದಲ್ಲಾಗಲಿ,ಅಣ್ಣ ತಮ್ಮಂದಿರ ಗೌಜಿಗಮ್ಮತ್ತುಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಬಂದಿರಲಿಲ್ಲ.ಒಟ್ಟಿನಲ್ಲಿ ಹೇಳುವುದಾದರೆ ಯಾವುದೇ ಸಂಪರ್ಕ ಮನೆಯವರ ಜೊತೆ ಸಿಗಲಿಲ್ಲವಂತೆ. ಅಷ್ಟಕ್ಕೂ ಅವರನ್ನು ಸ್ಥಳೀಯ ತನಿಯಪ್ಪ ಎಂಬವರು ಉದ್ಯೋಗ ನೀಡುವುದಾಗಿ ಮುಂಬಯಿಗೆ ಕರೆದುಕೊಂಡು ಹೋಗಿದ್ದರು ಎಂದಿದ್ದಾರೆ. ತಂದೆ ತಾಯಿಗೆ ಮಗನ ಬರುವಿಕೆ ಕಾದು ಕಾದು ಕೊನೆಯುಸಿರೆಳೆದರು. ಮಗ ಬದುಕಿ ಬರುವ ಆಸೆಯನ್ನು ತಂದೆತಾಯಿಯ ಜೊತೆ ಮನೆಯವರು ಕಳೆದುಕೊಂಡಿದ್ದರು. ಇದೀಗ ಅವರ ತಮ್ಮ ಗಂಗಾಧರ ಪೂಜಾರಿ ಅವರ ಮನೆಗೆ ಬಂದಿದ್ದಾರೆ.62 ವರ್ಷಗಳ ಬಳಿಕ ಊರಿಗೆ ಬಂದ ಅಣ್ಣನನ್ನು ಕಂಡು ತಮ್ಮನಿಗೆ ಬಹಳ ಸಂತೋಷವಾಗಿದೆ ಮಲೆಯಾಳ, ಮರಾಠಿ, ಬಂಗಾಳಿ, ಹಿ0ದಿ, ತುಳು ಹಾಗೂ ಕನ್ನಡ ಭಾಷೆಯಲ್ಲಿ ನಿರರ್ಗಳವಾಗಿ ಮಾತನಾಡಿದ್ದಾರೆ. ಯಾವುದೇ ದಾಖಲೆ ಪತ್ರಗಳು ಅವರಲ್ಲಿ ಇಲ್ಲ ಎಂದು ಹೇಳುತ್ತಾರೆ ಎಂದು ಮನೆಯವರು ತಿಳಿಸುತ್ತಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…