ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ನೀಡಲು 20 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಬ್ರಹ್ಮಾವರ ಮೆಸ್ಕಾಂ ಅಸಿಸ್ಟೆಂಟ್ ಇಂಜಿನಿಯರ್ ಅಶೋಕ್ ಪೂಜಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ದಿನೇಶ್ ಪೂಜಾರಿ ಅವರು ಮನೆಗೆ ವಿದ್ಯುತ್ ಸಂಪರ್ಕಕ್ಕಾಗಿ ಮೆಸ್ಕಾಂ ಇಂಜಿನಿಯರ್ ಬಳಿ ಹೋಗಿದ್ದರು. ಅದರಂತೆ ಸ್ಥಳ ಪರಿಶೀಲನೆ ನಡೆಸಿದ್ದ ಇಂಜಿನಿಯರ್ ಬಳಿಕ 20 ಸಾವಿರ ರೂ.ಗೆ ಬೇಡಿಕೆ ಇರಿಸಿದ್ದರು. ಈ ಕುರಿತು ದಿನೇಶ್ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಅದರಂತೆ ಇಂದು ಬೆಳಿಗ್ಗೆ ಲಂಚದ ಹಣ ಪಡೆಯುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಎಸ್ಪಿ ಕುಮಾರಚಂದ್ರ, ಡಿವೈಎಸ್ಪಿ ಮಂಜುನಾಥ ನೇತೃತ್ವದ ತಂಡವು ಮೆಸ್ಕಾಂ ಅಸಿಸ್ಟೆಂಟ್ ಇಂಜಿನಿಯರ್ ಅಶೋಕ್ ಪೂಜಾರಿಯನ್ನು ಬಂಧಿಸಿದೆ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…